‘ನನಗೆ ಇಷ್ಟು ದೊಡ್ಡ ಯಶಸ್ಸು ಸಿಕ್ಕಿದ್ದು ಇದೇ ಮೊದಲು’; ಎಲ್ಲರಿಗೂ ಧನ್ಯವಾದ ತಿಳಿಸಿದ ‘ತೋತಾಪುರಿ’ ಜಗ್ಗೇಶ್​

‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡಿನಿಂದ ನಟ ಜಗ್ಗೇಶ್​ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ‘ತೋತಾಪುರಿ’ ಸಿನಿಮಾದ ಈ ಹಾಡನ್ನು ಜನರು ತುಂಬ ಇಷ್ಟಪಟ್ಟಿದ್ದಾರೆ.

‘ನನಗೆ ಇಷ್ಟು ದೊಡ್ಡ ಯಶಸ್ಸು ಸಿಕ್ಕಿದ್ದು ಇದೇ ಮೊದಲು’; ಎಲ್ಲರಿಗೂ ಧನ್ಯವಾದ ತಿಳಿಸಿದ ‘ತೋತಾಪುರಿ’ ಜಗ್ಗೇಶ್​
| Updated By: ಮದನ್​ ಕುಮಾರ್​

Updated on: Feb 13, 2022 | 1:53 PM

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಜಗ್ಗೇಶ್​ (Jaggesh) ಅವರು ಅನೇಕ ಬಗೆಯ ಪಾತ್ರಗಳ ಮೂಲಕ ಜನರನ್ನು ರಂಜಿಸುತ್ತಾ ಬಂದಿದ್ದಾರೆ. ಈಗ ಅವರು ಅಭಿನಯಿಸಿರುವ ‘ತೋತಾಪುರಿ’ (Totapuri Kannada Movie) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಹಾಡಿನ ಮೂಲಕ ಈ ಚಿತ್ರ ಸಖತ್​ ಸದ್ದು ಮಾಡುತ್ತಿದೆ. ‘ಬಾಗ್ಲು ತೆಗಿ ಮೇರಿ ಜಾನ್​..’ (Baglu Tegi Meri Jaan) ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಈ ಗೀತೆಯನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಈವರೆಗೂ 85 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಿಸಲಾಗಿದೆ. ಈ ಗೆಲುವಿನ ಬಗ್ಗೆ ಜಗ್ಗೇಶ್​ ಮಾತನಾಡಿದ್ದಾರೆ. ‘ನನ್ನ ಅಭಿಮಾನಿಗಳಿಗೆ ನಾನು ಮೊದಲು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಇಷ್ಟು ವರ್ಷಗಳ ವೃತ್ತಿ ಜೀವನದಲ್ಲಿ 8ರಿಂದ 10 ಮಿಲಿಯನ್​ ವೀವ್ಸ್​ ಆಗುವಂತಹ ಸಾಂಗ್​ ಸಿಕ್ಕಿದ್ದು ಇದೇ ಮೊದಲು. ಜನರು ಈ ಹಾಡನ್ನು ತುಂಬ ಇಷ್ಟಪಟ್ಟಿದ್ದಾರೆ. ಇವತ್ತಿನದ್ದು ಸೋಶಿಯಲ್​ ಮೀಡಿಯಾ ತಲೆಮಾರು. ಆರಂಭದಲ್ಲಿ ಹಾಡಿನ ಟೀಸರ್​ ಬಿಟ್ಟಾಗ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಬರೀ ಹಿಂದಿ ಇದೆ ಅಂತ ಅಂದುಕೊಂಡಿದ್ದರು. ನಂತರ ಆ ಬಗ್ಗೆ ನಾನೊಂದು ವಿಡಿಯೋ ಹಂಚಿಕೊಂಡೆ. ಹಾಡು ಬೇರೆ ರೀತಿ ಇದೆ ಅಂತ ಹೇಳಿದೆ. ನಾನು ಏನಾದರೂ ಹೇಳಿದರೆ ಅದನ್ನು ನಂಬುವಂತಹ ಜನರು ಇದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಜಗ್ಗೇಶ್​ ಹೇಳಿದ್ದಾರೆ.

ಇದನ್ನೂ ಓದಿ:

ಈ ಫೋಟೋದ ಹಿಂದಿದೆ ಜಗ್ಗೇಶ್​ ಬದುಕಿನ ಕಥೆ; ರಾಯರು ನೀಡಿದ ಆ ಎರಡು ವರಗಳೇನು?

‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

Follow us
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​