ಉಡುಪಿಯಲ್ಲಿ ಭೀಕರ ಅಪಘಾತ, ಗುದ್ದಿದ ರಭಸಕ್ಕೆ ಬಸ್ ಸ್ಥಿತಿ ಹೇಗಾಗಿದೆ ನೋಡಿ
ಟೂರಿಸ್ಟ್ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ಬಳಿ ಟೂರಿಸ್ಟ್ ಬಸ್ ಲಾರಿಗೆ ಗುದ್ದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರವಾಸಿಗರ ಬಸ್ ನಜ್ಜುಗುಜ್ಜಾಗಿದೆ.
ಉಡುಪಿ, (ನವೆಂಬರ್ 03): ಟೂರಿಸ್ಟ್ ಬಸ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ಬಳಿ ನಡೆದಿದೆ. ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್, ಉದ್ಯಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 17 ಪ್ರವಾಸಿಗರಿಗೆ ಗಾಯಗಳಾಗಿವೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಪ್ರವಾಸಿಗರ ಬಸ್ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow Us
Latest Videos
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
