ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹುಚ್ಚು ಸಾಹಸಗಳನ್ನು ಮುಂದುವರಿಸಿರುವ ಅಲ್ಪಮತಿ ಪ್ರವಾಸಿಗರು!

Updated on: May 27, 2025 | 10:13 AM

ಹುಚ್ಚು ಸಾಹಸಗಳನ್ನು ಪ್ರದರ್ಶಿಸುವ ಪ್ರವಾಸಿಗರು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವುದರ ಜೊತೆಗೆ ತಮ್ಮ ವಾಹನಗಳನ್ನು ರಸ್ತೆಯಲ್ಲಿ ಅಡ್ಡಾದಿಡ್ಡಿ ನಿಲ್ಲಿಸಸುವ ಮೂಲಕ ಇಲ್ಲಿಂದ ಹೋಗುವ ಇತರರಿಗೂ ಅಡ್ಡಿಯನ್ನುಂಟು ಮಾಡುತ್ತಿದ್ದಾರೆ. ಇಲ್ಲಿಯ ರಸ್ತೆಗಳು ಕಿರಿದಾಗಿವೆ ಮತ್ತು ಒಂದು ಪಕ್ಕ ಪ್ರಪಾತ. ಮಳೆಯಿಂದ ಕೆಸರಾಗಿರುವ ರಸ್ತೆಯಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಅದಕ್ಕೆ ಯಾರು ಹೊಣೆ?

ಚಿಕ್ಕಮಗಳೂರು, ಮೇ 27: ರಾಜ್ಯದಾದ್ಯಂತ ಮಳೆ ಸುರಿಯುತ್ತಿದೆ ಮತ್ತು ಹವಾಮಾನ ಇಲಾಖೆ (IMD) ಆಯಾ ಜಿಲ್ಲೆಗಳಲ್ಲಿ ಮಳೆ ಸುರಿಯುವ ಪ್ರಮಾಣಕ್ಕೆ ಅನುಗುಣವಾಗಿ ರೆಡ್, ಆರೇಂಜ್ ಮತ್ತು ಯೆಲ್ಲೋ ಅಲರ್ಟ್​​ಗಳನ್ನು ಘೋಷಿಸಿದೆ. ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೇಗೆ ಸುರಿಯುತ್ತದೆ ಅಂತ ಕನ್ನಡಿಗರಿಗೆ ಗೊತ್ತಿಲ್ಲದಿಲ್ಲ. ಅದರೆ, ಈ ರಸ್ತೆಯ ಮೂಲಕ ಹಾದುಹೋಗುವ ಪ್ರವಾಸಿಗರಿಗೆ ತಮ್ಮ ಹುಚ್ಚಾಟ ಪ್ರದರ್ಶಿಸಲು ಚಾರ್ಮಾಡಿ ಘಾಟ್ ಪ್ರದೇಶವೇ ಅಗಬೇಕು. ಇಲ್ನೋಡಿ, ನಾಲ್ಕು ಜನ ಸುರಿಯುತ್ತಿರುವ ಮಳೆಯಲ್ಲಿ ಜಾರುವ ಬಂಡೆಗಳ ಮೇಲೆ ಹತ್ತುವ ಇಳಿಯುವ ಸಾಹಸ ಮಾಡುತ್ತಿದ್ದಾರೆ. ಪಕ್ಕದಲ್ಲಿ ಕಲ್ಲುಬಂಡೆಗಳ ಮೂಲಕ ನೀರು ಜಲಪಾತದಂತೆ ಬೀಳುತ್ತಿದೆ. ಕಾಲು ಜಾರಿದರೆ ಏನಾದೀತು ಅಂತ ಹೇಳುವ ಅವಶ್ಯಕತೆಯಿಲ್ಲ, ಆದರೆ ಮತಿಹೀನ ಪ್ರವಾಸಿಗರಿಗೆ ಹೇಳೋರು ಯಾರು?

ಇದನ್ನೂ ಓದಿ:  ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್: ಆಮೇಲೇನಾಯ್ತು?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More