ಹಾಸನ: ಕಾರಲ್ಲಿ ಹಣವಿಟ್ಟು ಡೋರ್ ಲಾಕ್ ಮಾಡೋದು ಮರೆತ ವ್ಯಾಪಾರಿ, ಹಣ ಲಪಟಾಯಿಸಿದ ಕಳ್ಳ

Updated on: Jun 09, 2025 | 2:58 PM

ಸುರೇಶ್ ಅಂಗಡಿಯಿಂದ ಹೊರಬಂದು ಕಾರು ಡೋರನ್ನು ಓಪನ್ ಮಾಡಿದಾಗ ಹಣದ ಬ್ಯಾಗ್ ಇಲ್ಲದಿರುವುದು ಗೊತ್ತಾಗಿದೆ. ಕೂಡಲೇ ಅವರು ಅರಸೀಕೆರೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬಂದು ಸಿಸಿಟಿವೊ ಫುಟೇಜ್ ಗಮನಿಸಿದಾಗ ಈ ದೃಶ್ಯ ಕಂಡಿದೆ. ಕಳ್ಳನ ಗುರುತೇನೋ ಪೊಲೀಸರಿಗೆ ಸಿಕ್ಕಿದೆ, ಅದರೆ ಸುರೇಶ್ ಅವರ ವಿವೇಚನೆಹೀನತೆ ಕಂಡು ಅವರಿಗೂ ಆಶ್ಚರ್ಯವಾಗಿರಬಹುದು.

ಹಾಸನ, ಜೂನ್ 9: ಕಳ್ಳರಿಗೆ ನಮ್ಮ ತಿಳಿಗೇಡಿತನ, ಬೇಜವಾಬ್ದಾರಿ ನಡಾವಳಿ ಎಷ್ಟು ನೆರವಾಗುತ್ತೆ ಅನ್ನೋದಿಕ್ಕೆ ಈ ವಿಡಿಯೋ ಸಾಕ್ಷಿ ಮಾರಾಯ್ರೇ. ಜಿಲ್ಲೆಯ ಅರಸೀಕೆರೆ ಪಟ್ಟಣದ ಸುಭಾಷ್​ನಗರದಲ್ಲಿ ವಾಸವಾಗಿರುವ ತಮಿಳುನಾಡು ಮೂಲದ ಕೊಬ್ಬರಿ ವ್ಯಾಪಾರಿ ಸುರೇಶ್ ಎನ್ನುವವರು ₹ 6.30 ಲಕ್ಷ ಹಣವನ್ನು ಪ್ರಾಯಶಃ ಬ್ಯಾಂಕ್​ನಿಂದ ವಿತ್​ಡ್ರಾ ಮಾಡಿ ತಮ್ಮ ಅಂಗಡಿಗೆ ಬಂದಿದ್ದಾರೆ. ಅಂಗಡಿಯೊಳಗೆ ಹೋಗಿರುವ ಅವರು ಹಣವನ್ನು ಕಾರಲ್ಲೇ ಇಟ್ಟು ಇಳಿದಿದ್ದಾರೆ. ಅದು ಓಕೆ, ಆದರೆ ಕಾರಿನ ಡೋರ್ ಲಾಕ್ ಮಾಡುವುದನ್ನು ಸುರೇಶ್ ಮರೆತಿದ್ದಾರೆ. ಅವರ ಚಲನವಲನಗಳನ್ನು ಗಮನಿಸುತ್ತಿದ್ದ ಕಳ್ಳ ಮೊಬೈಲ್ ಫೋನಲ್ಲಿ ಮಾತಾಡುತ್ತಿರುವಂತೆ ನಟಿಸಿ ಅನಾಮತ್ತಾಗಿ ಹಣದ ಚೀಲ ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ:  ದೇಶಭ್ರಷ್ಟ ಅನ್ನಿ ಒಪ್ತೀನಿ, ಆದ್ರೆ ಕಳ್ಳ ಅನ್ನೋಕೆ ನಾನೇನು ಕದ್ದಿದ್ದೀನಿ? ಹೊಟ್ಟೆಯೊಳಗಿನ ಸಂಕಟವೆಲ್ಲಾ ಬಿಚ್ಚಿಟ್ಟ ವಿಜಯ್ ಮಲ್ಯ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More