AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ: ಬಳ್ಳಾರಿ ಜೈಲಿಗೆ ಬಂದ ನಟನನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು, ಟ್ರಾಫಿಕ್ ಜಾಮ್!

ದರ್ಶನ್ ತೂಗುದೀಪ: ಬಳ್ಳಾರಿ ಜೈಲಿಗೆ ಬಂದ ನಟನನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು, ಟ್ರಾಫಿಕ್ ಜಾಮ್!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2024 | 10:55 AM

Share

Darshan Toogudeepa: ಕೊಲೆ ಅರೋಪ ಹೊತ್ತು ಜೈಲು ಸೇರಿದರೂ ನಟ ದರ್ಶನ್ ಜನಪ್ರಿಯತೆ ಕಡಿಮೆಯಾಗದಿರುವುದು ಅಚ್ಚರಿ ಮೂಡಿಸುತ್ತದೆ. ಬಳ್ಳಾರಿಯ ಯುವಕ ಯುವತಿಯರು ದರ್ಶನ್ ಹೊತ್ತ ವ್ಯಾನ್ ಕಂಡ ಕೂಡಲೇ ಹೋಯ್ ಎಂದು ಕಿರಚುತ್ತ ತಮ್ಮ ಸಂತಸ, ರೋಮಾಂಚನ ವ್ಯಕ್ತಪಡಿಸಿದರು.

ಬಳ್ಳಾರಿ: ಜನ ಮರುಳೋ ಜಾತ್ರೆ ಮರುಳೋ? ಇವತ್ತು ಬೆಳಗ್ಗೆ ಬೆಂಗಳೂರು ಪೊಲೀಸರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ತೂಗುದೀಪ ದರ್ಶನ್ ಅವರನ್ನು ಬಳ್ಳಾರಿಗೆ ಕರೆತಂದಾಗ ನಟನನ್ನು ನೋಡಲು ಬಳ್ಳಾರಿಯ ಜನ ರಸ್ತೆಗಳಲ್ಲಿ ನೆರೆದ ಕಾರಣ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನರನ್ನು ರಸ್ತೆಗಳಿಂದ ದೂರ ಸರಿಸಲು ಬಳ್ಳಾರಿ ಪೊಲೀಸರು ಹರಸಾಹಸ ಪಡಬೇಕಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ ತೂಗುದೀಪ: ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದಾಸನ ಎಂಟ್ರಿ ಹೇಗಿತ್ತು ನೋಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.