ಉತ್ತರ ಪ್ರದೇಶ: ಚಲಿಸುತ್ತಿರುವಾಗಲೇ ಇಬ್ಭಾಗವಾದ ನಂದನ್ ಕಾನನ್ ಎಕ್ಸ್ಪ್ರೆಸ್ ರೈಲು
ಚಲಿಸುತ್ತಿರುವಾಗಲೇ ರಾಯಲು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ದೀನ್ ದಯಾಳ್ ಜಂಕ್ಷನ್ ಬಳಿ ಸಂಭವಿಸಬಹುದಾದ ದೊಡ್ಡ ಅಪಾಯವೊಂದು ತಪ್ಪಿದೆ. ಜಂಕ್ಷನ್ನಿಂದ ಹೊರಟ ರೈಲು ಸ್ವಲ್ಪ ದೂರ ಹೋದ ನಂತರ ಎರಡು ಭಾಗಗಳಾಗಿ ವಿಭಜನೆಯಾಯಿತು. ಕಪ್ಲಿಂಗ್ ಮುರಿದುಹೋದ ಕಾರಣ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಚಂದೌಲಿ, ಮಾರ್ಚ್ 04: ಚಲಿಸುತ್ತಿರುವಾಗಲೇ ರಾಯಲು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ದೀನ್ ದಯಾಳ್ ಜಂಕ್ಷನ್ ಬಳಿ ಸಂಭವಿಸಬಹುದಾದ ದೊಡ್ಡ ಅಪಾಯವೊಂದು ತಪ್ಪಿದೆ. ಜಂಕ್ಷನ್ನಿಂದ ಹೊರಟ ರೈಲು ಸ್ವಲ್ಪ ದೂರ ಹೋದ ನಂತರ ಎರಡು ಭಾಗಗಳಾಗಿ ವಿಭಜನೆಯಾಯಿತು. ಕಪ್ಲಿಂಗ್ ಮುರಿದುಹೋದ ಕಾರಣ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ರೈಲು ದೆಹಲಿಯ ಆನಂದ್ ವಿಹಾರ್ ನಿಂದ ಒಡಿಶಾದ ಪುರಿಗೆ ಹೋಗುತ್ತಿತ್ತು. ಈ ಮಧ್ಯೆ, 12876 ನಂದನ್ ಕಾನನ್ ಎಕ್ಸ್ಪ್ರೆಸ್ ರೈಲಿನ ಸ್ಲೀಪರ್ ಎಸ್ 4 ಬೋಗಿಯ ಜೋಡಣೆ ಮುರಿದು ಬಿದ್ದಿದೆ. ಜೋಡಣೆಯಲ್ಲಿನ ಬಿರುಕು ಬಿಟ್ಟ ಕಾರಣ ರೈಲು ಎರಡು ಭಾಗವಾಯಿತು. ಈ ಸಮಯದಲ್ಲಿ, ರೈಲಿನೊಳಗೆ ಕುಳಿತಿದ್ದ ಪ್ರಯಾಣಿಕರಲ್ಲಿ ಭಯ ಮೂಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us