Kalaburagi News: ಇಂಜಿನಲ್ಲಿ ತಾಂತ್ರಿಕ ದೋಷ, ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಿದ ಪೈಲೆಟ್

ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ.

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿದೆ. ಆದ್ರೆ, ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್​​ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us