Puja at minister’s office: ಸಚಿವ ಸಂತೋಷ್ ಲಾಡ್ ಕಚೇರಿ ಪೂಜೆಗೆ ಆಗಮಿಸಿದ ಲೈಂಗಿಕ ಅಲ್ಪಾಸಂಖ್ಯಾತರು ಮನವಿಯೊಂದನ್ನು ಸಲ್ಲಿಸಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Jun 01, 2023 | 7:16 PM

ಪೂಜೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಮಂಗಳಮುಖಿಯರು ಅರ್ಜಿಯೊಂದನ್ನು ಸಚಿವರಿಗೆ ಸಲ್ಲಿಸಿದರು.

ಬೆಂಗಳೂರು: ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಂತೋಷ್ ಲಾಡ್ (Santosh Lad) ಇಂದು ವಿಧಾನ ಸೌಧದಲ್ಲಿ ತಮ್ಮ ಕಚೇರಿಯನ್ನು ಪ್ರವೇಶಿಸಿ ಕುರ್ಚಿಯಲ್ಲಿ ಆಸೀನರಾಗುವ ಮೊದಲು ವಿಶೇಷ ಪೂಜೆ ಮಾಡಿಸುವಾಗ ಅವರ ಕುಟುಂಬ ಜೊತೆಗಿತ್ತು. ಪೂಜೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಮಂಗಳಮುಖಿಯರು (transgender) ಅರ್ಜಿಯೊಂದನ್ನು ಸಚಿವರಿಗೆ ಸಲ್ಲಿಸಿದರು. ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ, ಗಾಯಕಿ ಮತ್ತು ಮೋಟಿವೇಷನಲ್ ಸ್ಪೀಕರ್ ಅಕ್ಕೈ ಪದ್ಮಶಾಲಿ (Akkai Padmashali) ಅವರು ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಮನವಿ ಪತ್ರವನ್ನು ಸಚಿವ ಲಾಡ್ ಗೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.