ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ…?

Edited By:

Updated on: Jun 27, 2025 | 5:54 PM

ಕೆಂಪೇಗೌಡರನ್ನ ಬೆಂಗಳೂರು ನಗರ ನಿರ್ಮಾತೃ ಎಂದೇ ಕರೆಯಲಾಗುತ್ತೆ. ಇಂತಹ ಮಹಾತ್ಮ ದಿನಾಚರಣೆಯನ್ನು ಇಂದು (ಜೂನ್ 27) ರಾಜ್ಯದೆಲ್ಲೆಡೆ ಆಚರಿಸಲಾಗಿದೆ. ಆದ್ರೆ, ಕೋಲಾರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಯಲ್ಲಿ ಮಂಗಳಮುಖಿಯರು ಅಶ್ಲೀಲವಾಗಿ ನೃತ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು...ಕೋಲಾರದಲ್ಲಿಂದು ಕೆಂಪೇಗೌಡ ಜಯಂತಿಯಲ್ಲಿ ಮಂಗಳಮುಖಿಯರು ಅರೆ ಬೆರೆ ಬಟ್ಟೆ ತೊಟ್ಟು ಯುವಕರೊಂದಿಗೆ ಅಶ್ಲೀಲ ಪ್ರಚೋದನಾ ನೃತ್ಯ ಮಾಡಿದ್ದಾರೆ. ಈ ವಿಡಿಯೋಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ಮಹಾತ್ಮನ ಜಯಂತಿ ವೇಳೆ ಇದೆಲ್ಲಾ ಬೇಕಿತ್ತಾ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಕೋಲಾರ, (ಜೂನ್ 27):ನಾಡಪ್ರಭು ಕೆಂಪೇಗೌಡರು ಗೋಪುರಗಳು, ಕೆರೆ ಕಟ್ಟೆಗಳು ವೃತ್ತಿಗೊಂದು ಪೇಟೆ ನಿರ್ಮಾಣ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಅದಕ್ಕೆ ಕೆಂಪೇಗೌಡರನ್ನ ಬೆಂಗಳೂರು ನಗರ ನಿರ್ಮಾತೃ ಎಂದೇ ಕರೆಯಲಾಗುತ್ತೆ. ಇಂತಹ ಮಹಾತ್ಮ ದಿನಾಚರಣೆಯನ್ನು ಇಂದು (ಜೂನ್ 27) ರಾಜ್ಯದೆಲ್ಲೆಡೆ ಆಚರಿಸಲಾಗಿದೆ. ಆದ್ರೆ, ಕೋಲಾರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಯಲ್ಲಿ ಮಂಗಳಮುಖಿಯರು ಅಶ್ಲೀಲವಾಗಿ ನೃತ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು…ಕೋಲಾರದಲ್ಲಿಂದು ಕೆಂಪೇಗೌಡ ಜಯಂತಿಯಲ್ಲಿ ಮಂಗಳಮುಖಿಯರು ಅರೆ ಬೆರೆ ಬಟ್ಟೆ ತೊಟ್ಟು ಯುವಕರೊಂದಿಗೆ ಅಶ್ಲೀಲ ಪ್ರಚೋದನಾ ನೃತ್ಯ ಮಾಡಿದ್ದಾರೆ. ಈ ವಿಡಿಯೋಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ಮಹಾತ್ಮನ ಜಯಂತಿ ವೇಳೆ ಇದೆಲ್ಲಾ ಬೇಕಿತ್ತಾ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More