Amit Shah in Karnataka: ಸಚಿವ ಶ್ರೀರಾಮುಲುಗೆ ಸಂಡೂರುನಿಂದ ಸ್ಪರ್ಧಿಸುವ ಆಸೆ, ವರಿಷ್ಠರು ಒಪ್ಪುವರೇ?

ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2023 | 2:41 PM

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವರು ತಾವು ಸಂಡೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.

ಬಳ್ಳಾರಿ: ಜಿಲ್ಲೆಯ ಸಂಡೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ವಿಜಯ ಸಂಕಲ್ಪ ಯಾತ್ರೆ ಉದ್ಘಾಟನೆ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿಕೊಂಡಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ಕಾಂಗ್ರೆಸ್ ಭದ್ರಕೋಟೆಯಾಗಿರುವ ಸಂಡೂರನ್ನು (Sandur) ಭೇದಿಸಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ ಎಂದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವರು ತಾವು ಸಂಡೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us