AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ನಾಳೆ ಸರ್ಕಾರೀ ಬಸ್ ರಸ್ತೆಗಿಳಿಯುತ್ತವೆಯೇ? ಸ್ಪಷ್ಟನೆ ನೀಡದ ಸಚಿವ ರಾಮಲಿಂಗಾರೆಡ್ಡಿ

ಕರ್ನಾಟಕ ಬಂದ್: ನಾಳೆ ಸರ್ಕಾರೀ ಬಸ್ ರಸ್ತೆಗಿಳಿಯುತ್ತವೆಯೇ? ಸ್ಪಷ್ಟನೆ ನೀಡದ ಸಚಿವ ರಾಮಲಿಂಗಾರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 21, 2025 | 2:15 PM

Share

ಕರ್ನಾಟಕ ಬಂದ್: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಹಿನ್ನೆಲೆಯಲ್ಲಿ ನಾಳೆ ಬಂದ್​ಗೆ ಕರೆ ನೀಡಲಾಗಿದೆ. ಎಸ್​ಎಸ್ಎಲ್ಸಿ ಮತ್ತು ಬೇರೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಂದ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದೆ. ಇನ್ನೂ ಹಲವಾರು ಕನ್ನಡ ಸಂಘಟನೆಗಳು ಬಂದ್​​ನಿಂದ ಹಿಂದೆ ಸರಿದಿವೆ. ಅದೆಲ್ಲ ಸರಿ, ಅದರೆ ಸಾರಿಗೆ ಸಚಿವ ತಮ್ಮ ನಿಲುವನ್ನು ಸ್ಪಷ್ಟಪಡಿಸಿ ಜನರ ಆತಂಕ ದೂರಮಾಡಬೇಕಿತ್ತು.

ಬೆಂಗಳೂರು, 21 ಮಾರ್ಚ್: ರಾಜ್ಯದ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಎಲ್ಲ ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗುತ್ತಿಲ್ಲ. ಅದರೆ ಬಂದ್ ಹಿನ್ನೆಲೆಯಲ್ಲಿ ಕೆಎಸ್​ಅರ್​ಟಿಸಿ ಮತ್ತು ಬಿಎಂಟಿಸಿ ಬಸ್​​ಗಳ ರಸ್ತೆಗಿಳಿಯಲಿವೆಯೇ ಅನ್ನೋದು ಜನರ ಮನದಲ್ಲಿರುವ ದೊಡ್ಡ ಆತಂಕ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಸ್ ಗಳ ಓಡಾಟದ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿಲ್ಲ. ಕೆಎಸ್​ಆರ್​ಟಿಸಿ ಯೂನಿಯನ್​ಗಳು ಒಗ್ಗೂಡಿ ಬಂದ್​ಗೆ ಬೆಂಬಲ ನೀಡಿದರೆ ಬಸ್ ಓಡಲ್ಲ, ಬೆಂಬಲಿಸದಿದ್ದರೆ ಓಡುತ್ತವೆ ಎಂದು ಸಚಿವರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Bandh: ಕರ್ನಾಟಕ ಬಂದ್ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.