ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ

Updated on: Mar 29, 2026 | 10:34 PM

ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.

ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More