‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು

Updated on: Jan 14, 2025 | 8:19 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪ್ರೀತಿ ಹುಟ್ಟಿದೆ. ತ್ರಿವಿಕ್ರಂ ಅವರು ಓಪನ್ ಆಗಿ ಭವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಆದರೆ, ಇದು ದೊಡ್ಮನೆಯಲ್ಲಿ ಕೊನೆ ಆಗುವ ಸೂಚನೆಯೂ ಸಿಕ್ಕಿದೆ. ಈ ಬಗ್ಗೆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಭವ್ಯಾ ಹಾಗೂ ತ್ರಿವಿಕ್ರಂ ಮಧ್ಯೆ ಪ್ರೀತಿ ಹುಟ್ಟಿತು ಎನ್ನುವಾಗಲೇ ಇಬ್ಬರ ಮಧ್ಯೆ ಕಿರಿಕ್ ಶುರುವಾಗಿದೆ. ತಮ್ಮನ್ನು ಭವ್ಯಾ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪವನ್ನು ತ್ರಿವಿಕ್ರಂ ಮಾಡಿದ್ದಾರೆ. ಅಲ್ಲದೆ, ಭವ್ಯಾ ವಿರುದ್ಧ ಖಾರದ ಮಾತುಗಳನ್ನು ಬಳಕೆ ಮಾಡಿದ್ದಾರೆ. ‘ನಿಮ್ಮ ಬಂಡವಾಳ ಗೊತ್ತಾಯ್ತು, ಪುಂಗಬೇಡ’ ಎಂಬಿತ್ಯಾದಿ ಶಬ್ದಗಳ ಬಳಕೆ ಆಗಿದೆ. ಇದರಿಂದ ಭವ್ಯಾ ಹಾಗೂ ತ್ರಿವಿಕ್ರಂ ದೂರವಾಗುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More