Dharmasthala Mask Man Arrested; ಸತ್ಯ ಎಷ್ಟೇ ಕಹಿಯಾದರೂ ಅದು ಸತ್ಯವೇ, ಸರ್ಕಾರಕ್ಕೆ ಅರ್ಥವಾಗಲಿಲ್ಲ: ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Aug 23, 2025 | 5:11 PM

ಮುಸುಕುಧಾರಿ ವ್ಯಕ್ತಿ ಒಬ್ಬ ಫ್ರಾಡ್, ಅವನ ಯೋಗ್ಯತೆ ಏನು? ಅವನೊಬ್ಬ ಪೌರ ಕಾರ್ಮಿಕ ಮಾತ್ರ. ಅವನ ಮಾತಿಗೆ ಬೆಲೆ ನೀಡುವ ಅವಶ್ಯಕತೆ ಎಲ್ಲಿದೆ, ಅವನ ಇತಿಮಿತಿಯನ್ನು ಅರ್ಥಮಾಡಿಕೊಳ್ಳಿ ಅಂತ ನಾಲ್ಕು ಗೋಡೆಗಳ ನಡುವೆ ಹೇಳಿದರೂ ಸರ್ಕಾರ ಅದನ್ನು ಅರ್ಥಮಾಡಿಕೊಳ್ಳಲಿಲ್ಲ, ಅವನ ಮತ್ತು ಒಂದಷ್ಟು ಎಡಪಂಥೀಯರ ಮಾತನ್ನು ನಂಬಿಕೊಂಡು ಕಾರ್ಯಾಚರಣೆಗೆ ಮುಂದಾದ ರಾಜ್ಯ ಸರ್ಕಾರ 7 ಕೋಟಿ ಕನ್ನಡಿಗರ ಮನಸ್ಸು ನೋಯಿಸಿದೆ ಎಂದು ಸೋಮಣ್ಣ ಹೇಳಿದರು.

ತುಮಕೂರು, ಆಗಸ್ಟ್ 23: ನಗರದಲ್ಲಿ ಮಾಧ್ಯಮ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಅರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ತರಾಟೆಗೆ ತೆಗೆದುಕೊಂಡರು. ಸತ್ಯ ಕಹಿಯಾಗಿದ್ದರೂ ಯಾವತ್ತಿಗೂ ಸತ್ಯವೇ, ಸುಳ್ಳುಗಳನ್ನು ನಂಬಿದ ರಾಜ್ಯ ಸರ್ಕಾರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಅರ್ಥಮಾಡಿಕೊಳ್ಳದೆ ತನಿಖೆಯ ಕೆಲಸಕ್ಕೆ ಮುಂದಾಯಿತು, ಧರ್ಮಸ್ಥಳದ ಭಕ್ತರು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ, ವಿಶ್ವದೆಲ್ಲೆಡೆ ಇದ್ದಾರೆ, ಅವರೆಲ್ಲರ ಧಾರ್ಮಿಕ ಭಾವನೆಗಳಿಗೆ ಸರ್ಕಾರ ಧಕ್ಕೆಯುಂಟು ಮಾಡಿದೆ, ಇದಕ್ಕೆ ನೇರ ಹೊಣೆಗಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮಿಂದಾಗಿರುವ ಅಚಾತುರ್ಯಕ್ಕೆ ಅವರು ಬೆಲೆ ತೆರಲಿದ್ದಾರೆ ಎಂದು ಸೋಮಣ್ಣ ಹೇಳಿದರು.

ಇದನ್ನೂ ಓದಿ:  ಧರ್ಮಸ್ಥಳ ಕೇಸ್​: ಮುಸುಕುಧಾರಿ ಚಿನ್ನಯ್ಯನ ಅಣ್ಣ ಎಸ್​ಐಟಿ ವಶಕ್ಕೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.