ಸ್ವಾಮೀಜಿಯನ್ನು ಬಂಧಿಸಿದರೆ ಸತ್ಯ ಹೊರಬರುತ್ತದೆ ಅನ್ನುತ್ತಾಳೆ ಚೈತ್ರಾ ಕುಂದಾಪುರ, ಸ್ವಾಮೀಜಿ ಯಾರು ಅಂತ ಪೊಲೀಸರು ಹೇಳಬೇಕು!

ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗಡೆ ಹೋಗುತ್ತಾಳೆ.

|

Updated on: Sep 14, 2023 | 10:45 AM

ಬೆಂಗಳೂರು: ಜಟ್ಟಿಯೊಬ್ಬ ಚಿತ್ತಾದರೂ ಮೀಸೆ ತನ್ನ ಮಣ್ಣಾಗಿಲ್ಲ ಅಂದಿದ್ದನಂತೆ! ಹಾಗಿದೆ ಈಯಮ್ಮನ ವರಸೆ. ವಿಧಾನ ಸಭಾ ಚುನಾವಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Pujari) ಟಿಕೆಟ್ ಕೊಡಿಸುವ ಭರವಸೆ ನೀಡಿ ರೂ. ಕೋಟಿ ಹಣ ಪೀಕಿ ವಂಚಿಸಿರುವ ಅರೋಪದಲ್ಲಿ ಅರೆಸ್ಟ್ ಆಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪರಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು (CCB sleuths) ವಿಚಾರಣೆಗೆ ಕರೆ ತಂದಿದ್ದಾರೆ. ಸ್ಟೇಷನ್ ಒಳಗೆ ಹೋಗುವಾಗ ಆಕೆ ಆಡಿದ ಮಾತುಗಳನ್ನು ಕೇಳಿಸಿಕೊಳ್ಳಿ. ಯಾವುದೇ ಸ್ವಾಮೀಜಿ (Swamiji) ಅಂತೆ, ಅವರನ್ನು ಸೆರೆ ಹಿಡಿದರೆ ಸತ್ಯ ಬಯಲಿಗೆ ಬರುತ್ತೆ ಎಂದು ಹೇಳುವ ಚೈತ್ರಾ ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ನಡೆದಿರುವ ಷಡ್ಯಂತ್ರಕ್ಕೆ ಬಲಿಪಶುವಾಗಿದ್ದೇನೆ ಅನ್ನುತ್ತಾಳೆ. ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗ್ಹೋಗುತ್ತಾಳೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್