ಸ್ವಾಮೀಜಿಯನ್ನು ಬಂಧಿಸಿದರೆ ಸತ್ಯ ಹೊರಬರುತ್ತದೆ ಅನ್ನುತ್ತಾಳೆ ಚೈತ್ರಾ ಕುಂದಾಪುರ, ಸ್ವಾಮೀಜಿ ಯಾರು ಅಂತ ಪೊಲೀಸರು ಹೇಳಬೇಕು!
ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗಡೆ ಹೋಗುತ್ತಾಳೆ.
ಬೆಂಗಳೂರು: ಜಟ್ಟಿಯೊಬ್ಬ ಚಿತ್ತಾದರೂ ಮೀಸೆ ತನ್ನ ಮಣ್ಣಾಗಿಲ್ಲ ಅಂದಿದ್ದನಂತೆ! ಹಾಗಿದೆ ಈಯಮ್ಮನ ವರಸೆ. ವಿಧಾನ ಸಭಾ ಚುನಾವಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Pujari) ಟಿಕೆಟ್ ಕೊಡಿಸುವ ಭರವಸೆ ನೀಡಿ ರೂ. ಕೋಟಿ ಹಣ ಪೀಕಿ ವಂಚಿಸಿರುವ ಅರೋಪದಲ್ಲಿ ಅರೆಸ್ಟ್ ಆಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪರಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು (CCB sleuths) ವಿಚಾರಣೆಗೆ ಕರೆ ತಂದಿದ್ದಾರೆ. ಸ್ಟೇಷನ್ ಒಳಗೆ ಹೋಗುವಾಗ ಆಕೆ ಆಡಿದ ಮಾತುಗಳನ್ನು ಕೇಳಿಸಿಕೊಳ್ಳಿ. ಯಾವುದೇ ಸ್ವಾಮೀಜಿ (Swamiji) ಅಂತೆ, ಅವರನ್ನು ಸೆರೆ ಹಿಡಿದರೆ ಸತ್ಯ ಬಯಲಿಗೆ ಬರುತ್ತೆ ಎಂದು ಹೇಳುವ ಚೈತ್ರಾ ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ನಡೆದಿರುವ ಷಡ್ಯಂತ್ರಕ್ಕೆ ಬಲಿಪಶುವಾಗಿದ್ದೇನೆ ಅನ್ನುತ್ತಾಳೆ. ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗ್ಹೋಗುತ್ತಾಳೆ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

