‘ಸಾರಾಯಿ ಶಾಂತಮ್ಮ’ ರಾಗಿಣಿ ದ್ವಿವೇದಿ ಬಗ್ಗೆ ತುಕಾಲಿ ಸಂತು ಹೊಗಳಿದ್ದೇ ಹೊಗಳಿದ್ದು

Updated on: Feb 04, 2025 | 9:47 PM

‘ಗಜರಾಮ’ ಸಿನಿಮಾದ ವಿಶೇಷ ಹಾಡಿನಲ್ಲಿ ನಟಿ ರಾಗಿಣಿ ದ್ವಿವೇದಿ ಅವರು ಹೆಜ್ಜೆ ಹಾಕಿದ್ದಾರೆ. ‘ಸಾರಾಯಿ ಶಾಂತಮ್ಮ’ ಹಾಡು ಸಖತ್ ಗ್ಲಾಮರಸ್ ಆಗಿ ಮೂಡಿಬಂದಿದೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ತುಕಾಲಿ ಸಂತೋಷ್ ಅವರು ರಾಗಿಣಿ ದ್ವಿವೇದಿ ಅವರನ್ನು ಸಿಕ್ಕಾಪಟ್ಟೆ ಹೊಗಳಿದ್ದಾರೆ. ರಾಜವರ್ಧನ್ ನಟನೆಯ ಈ ಸಿನಿಮಾ ಫೆಬ್ರವರಿ 7ರಂದು ಬಿಡುಗಡೆ ಆಗಲಿದೆ.

ರಾಜವರ್ಧನ್ ಅವರು ‘ಗಜರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಸಾರಾಯಿ ಶಾಂತಮ್ಮ’ ಹಾಡಿನಲ್ಲಿ ರಾಗಿಣಿ ಅವರು ಬಿಂದಾಸ್ ಆಗಿ ಹೆಜ್ಜೆ ಆಗಿದ್ದಾರೆ. ಸಿನಿಮಾದ ಪ್ರೆಸ್​ಮೀಟ್​ನಲ್ಲಿ ತುಕಾಲಿ ಸಂತೋಷ್ ಅವರು ಮಾತನಾಡಿದ್ದಾರೆ. ‘ನಾನು ಇಂದು ರಾಗಿಣಿ ಮೇಡಂ ಅವರನ್ನು ನೋಡಲು ಹಾಸನದಿಂದ ಬಂದೆ. ನಾವೆಲ್ಲ ಅವರನ್ನು ಟಿವಿಯಲ್ಲಿ ನೋಡುತ್ತಿದ್ದೆವು. ಈಗ ನೇರವಾಗಿ ನೋಡುವ ಅವಕಾಶ ಸಿಕ್ಕಿದೆ’ ಎಂದು ತುಕಾಲಿ ಸಂತೋಷ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More