ಕಾರು ಅಪಘಾತದ ಬಳಿಕ ಮಾತನಾಡಿದ ತುಕಾಲಿ ಸಂತೋಷ್

ತುಕಾಲಿ ಸಂತೋಷ್ ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದರು. ಕಿಯಾ ಕಾರು ಖರೀದಿ ಮಾಡಿ ಸಂಭ್ರಮಿಸಿದ್ದರು. ಆದರೆ, ಈ ಕಾರು ಈಗ ಅಪಘಾತಕ್ಕೆ ಒಳಗಾಗಿದೆ. ಕಾರಿಗೆ ಹಾನಿ ಆಗಿದೆ. ಅದೇ ರೀತಿ ಆಟೋ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್ ಮಾತನಾಡಿದ್ದಾರೆ.

ಕಾರು ಅಪಘಾತದ ಬಳಿಕ ಮಾತನಾಡಿದ ತುಕಾಲಿ ಸಂತೋಷ್
|

Updated on:Mar 14, 2024 | 8:34 AM

ತುಕಾಲಿ ಸಂತೋಷ್ (Tukali Santhosh) ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದರು. ಕಿಯಾ ಕಾರು ಖರೀದಿ ಮಾಡಿ ಸಂಭ್ರಮಿಸಿದ್ದರು. ಆದರೆ, ಈ ಕಾರು ಈಗ ಅಪಘಾತಕ್ಕೆ ಒಳಗಾಗಿದೆ. ಕಾರಿಗೆ ಹಾನಿ ಆಗಿದೆ. ಅದೇ ರೀತಿ ಆಟೋ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್ ಮಾತನಾಡಿದ್ದಾರೆ. ‘ನಾನು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ನನ್ನ ಊರು ಹೊಳೆನರಸೀಪುರ ಕಡೆ ಹೋಗುತ್ತಿದ್ದೆ. ಈ ವೇಳೆ ಅಪಘಾತ ಸಂಭವಿಸಿದೆ’ ಎಂದಿದ್ದಾರೆ ಅವರು. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಯಾರದ್ದು ತಪ್ಪು ಎನ್ನುವ ವಿಚಾರ ಇನ್ನಷ್ಟೇ ಗೊತ್ತಾಗಬೇಕಿದೆ. ಇತ್ತೀಚೆಗೆ ತುಕಾಲಿ ಸಂತೋಷ್ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:22 am, Thu, 14 March 24

Follow us