AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 10: ‘ವರ್ತೂರು ಸಂತೋಷ್​ ಮಾತನಾಡಿದರೂ ಅತ್ತಂಗೆ ಕಾಣುತ್ತೆ’: ನೊಂದವರ ಬಗ್ಗೆ ತುಕಾಲಿ ಮಾತು

BBK 10: ‘ವರ್ತೂರು ಸಂತೋಷ್​ ಮಾತನಾಡಿದರೂ ಅತ್ತಂಗೆ ಕಾಣುತ್ತೆ’: ನೊಂದವರ ಬಗ್ಗೆ ತುಕಾಲಿ ಮಾತು

ಮದನ್​ ಕುಮಾರ್​
|

Updated on: Nov 26, 2023 | 12:06 PM

Share

ಸುದೀಪ್​ ಕೇಳಿದ ಕೆಲವು ಪ್ರಶ್ನೆಗಳಿಗೆ ತುಕಾಲಿ ಸಂತೋಷ್​ ಉತ್ತರ ನೀಡಿದ್ದಾರೆ. ನೊಂದವರ ಸಂಘದಲ್ಲಿ ಇರುವವರ ಪೈಕಿ ಯಾರಿಗೆ ಯಾವ ಸ್ಥಾನ ಎಂದು ಕೇಳಿದ್ದಕ್ಕೆ ತುಕಾಲಿ ಸಂತೋಷ್​ ಈ ರೀತಿ ಉತ್ತರ ನೀಡಿದ್ದಾರೆ. ಅವರ ತಮಾಷೆಯ ಮಾತುಗಳನ್ನು ಕೇಳಿ ಸುದೀಪ್​ ಅವರು ಜೋರಾಗಿ ನಕ್ಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಹಾಸ್ಯ ನಟ ತುಕಾಲಿ ಸಂತೋಷ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ನಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ವೀಕೆಂಡ್​ನಲ್ಲೂ ಅವರು ಮನರಂಜನೆ ನೀಡುತ್ತಾರೆ. ಈ ಭಾನುವಾರ (ನವೆಂಬರ್​ 26) ಕಿಚ್ಚ ಸುದೀಪ್​ (Kichcha Sudeep) ಕೇಳಿದ ಕೆಲವು ಪ್ರಶ್ನೆಗಳಿಗೆ ತುಕಾಲಿ ಸಂತೋಷ್​ ಉತ್ತರ ನೀಡಿದ್ದಾರೆ. ನೊಂದವರ ಸಂಘದಲ್ಲಿ ಇರುವವರ ಪೈಕಿ ಯಾರಿಗೆ ಯಾವ ಸ್ಥಾನ ಎಂದು ಕೇಳಿದ್ದಕ್ಕೆ ತುಕಾಲಿ ಸಂತೋಷ್​ (Tukali Santhosh) ಈ ರೀತಿ ಉತ್ತರ ನೀಡಿದ್ದಾರೆ. ‘ನೊಂದವರ ಸಂಘಕ್ಕೆ ಕಾರ್ತಿಕ್​ ಅಧ್ಯಕ್ಷ. ಯಾಕೆಂದರೆ, ನಮ್ಮ ಗುಂಪಲ್ಲಿ ಜಾಸ್ತಿ ನೊಂದಿರುವವನು ಅವನೇ. ವರ್ತೂರು ಸಂತೋಷ್​ ಉಪಾಧ್ಯಕ್ಷರು. ಅವರು ಮಾತನಾಡಿದರೂ ಅತ್ತಂತೆ ಕಾಣುತ್ತಾ ಇರುತ್ತೆ. ಪ್ರತಾಪ್​ ಅವರು ಕಾರ್ಯದರ್ಶಿ. ತಾವು ಯಾವ ಗುಂಪಿಗೂ ಸೇರಲ್ಲ ಅಂತ ಹೋಗಿದ್ದರು. ಆ ಕಡೆ ಹೋದಮೇಲೆ ಅಪಾರವಾದ ನೋವು ಅನುಭವಿಸಿಕೊಂಡು ಬಂದಿದ್ದಾರೆ’ ಎಂದು ತುಕಾಲಿ ಸಂತೋಷ್​ ಹೇಳಿದ್ದು ಕೇಳಿ ಸುದೀಪ್​ ನಕ್ಕಿದ್ದಾರೆ. ನವೆಂಬರ್​ 26ರ ರಾತ್ರಿ 9.30ಕ್ಕೆ ಕಲರ್ಸ್​ ಕನ್ನಡದಲ್ಲಿ ಈ ಸಂಚಿಕೆ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆಯೂ ಉಚಿತವಾಗಿ ಲೈವ್​ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More