ಬಿಗ್ ಬಾಸ್ ಮನೆಯಲ್ಲಿ ಪತ್ನಿ ಕೊಟ್ಟ ಮಾತಿನ ಪೆಟ್ಟಿಗೆ ಕಂಗಾಲಾದ ತುಕಾಲಿ ಸಂತೋಷ್

Updated on: Dec 26, 2023 | 2:23 PM

‘ನನ್ನ ಪತ್ನಿಯನ್ನು ಮಾತ್ರ ಕಳುಹಿಸಬೇಡಿ’ ಎಂದು ಸಂತೋಷ್ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರ ಇಟ್ಟುಕೊಂಡು ಅವರ ಪತ್ನಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ತುಕಾಲಿ ಸಂತೋಷ್ ಅವರದ್ದು ಪ್ರೇಮ ವಿವಾಹ. ಅನೇಕ ಬಾರಿ ಅವರು ಬಿಗ್ ಬಾಸ್ ಮನೆಯಲ್ಲಿ ಪತ್ನಿಯನ್ನು ನೆನಪಿಸಿಕೊಂಡಿದ್ದಿದೆ. ಈ ವಾರ ಫ್ಯಾಮಿಲಿ ವೀಕ್. ಹೀಗಾಗಿ, ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬರುತ್ತಿದ್ದಾರೆ. ಅದೇ ರೀತಿ ಬಿಗ್ ಬಾಸ್ ಮನೆಗೆ ತುಕಾಲಿ ಸಂತೋಷ್ (Tukali Santosh) ಅವರ ಪತ್ನಿಯ ಆಗಮನ ಆಗಿದೆ. ಆರಂಭದಲ್ಲಿ ‘ನನ್ನ ಪತ್ನಿಯನ್ನು ಮಾತ್ರ ಕಳುಹಿಸಬೇಡಿ’ ಎಂದು ಸಂತೋಷ್ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರ ಇಟ್ಟುಕೊಂಡು ಅವರ ಪತ್ನಿ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ನನ್ನ ಪತ್ನಿ ಊರಲ್ಲಿ ಎಮ್ಮೆ ಕಾಯುತ್ತಿದ್ದಳು’ ಎಂದರು ಸಂತೋಷ್. ಇದಕ್ಕೂ ಅವರ ಪತ್ನಿ ತಿರುಗೇಟು ಕೊಟ್ಟಿದ್ದಾರೆ. ‘ಇವನೇನು ಮೈಸೂರಿನಲ್ಲಿ ಅರ್ಜುನನ (ಆನೆ) ಕಾಯ್ತಾ ಇದ್ನಾ’ ಎಂದಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ. ಇಂದು (ಡಿಸೆಂಬರ್ 26) ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More