ಗುಂಡಿಗಳ ಮುಂದೆ ತುಳಸಿ ಪೂಜೆ: ಮಹಿಳೆಯರಿಂದ ವಿನೂತನ ಪ್ರತಿಭಟನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 05, 2022 | 9:28 PM

ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಗುಂಡಿಗಳ ಮುಂದೆ ತುಳಸಿ ಪೂಜೆ ಮಾಡಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿರುವಂತಹ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ: ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಗುಂಡಿಗಳ ಮುಂದೆ ತುಳಸಿ ಪೂಜೆ ಮಾಡಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಗೋಪನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗುಂಡಿಗಳ ಮುಂದೆ ಟೇಬಲ್ ಇಟ್ಟು ಕಬ್ಬು ತಳಿರು ತೋರಣ ಕಟ್ಟಿ ತುಳಸಿ ಪೂಜೆ ಮಾಡಲಾಗಿದೆ. ರಸ್ತೆ ಗುಂಡಿ ಮುಚ್ಚುವಂತೆ ಮನವಿ ಮಾಡಿದ್ರೂ ಸ್ಪಂದಿಸಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್​​​ ವಿರುದ್ಧ ಮಹಿಳೆಯರು ಆರೋಪ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 9:26 pm, Sat, 5 November 22

Follow us on