ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ? ಪರಮೇಶ್ವರ್ ಹೇಳಿದ್ದಿಷ್ಟು

Edited By:

Updated on: May 18, 2026 | 9:55 PM

ತುಮಕೂರಿನಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಸಚಿವ ಡಾ. ಜಿ. ಪರಮೇಶ್ವರ್ ಕಂದಾಯ ಇಲಾಖೆಯ ಸಾಧನೆಗಳನ್ನು ವಿವರಿಸಿದರು. ರಾಜ್ಯದಲ್ಲಿ 13.5 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಾಗಿದೆ, ಇದರಲ್ಲಿ ತುಮಕೂರು ಜಿಲ್ಲೆ 1,52,492 ಹಕ್ಕುಪತ್ರಗಳೊಂದಿಗೆ ಪ್ರಥಮ ಸ್ಥಾನದಲ್ಲಿದೆ. ಈ ಸಾಧನೆ ಗಿನ್ನಿಸ್ ವಿಶ್ವ ದಾಖಲೆಗೆ ಸೇರಿದ್ದು, ದಾಖಲೆ ಪತ್ರ ನೀಡಲು ಲಂಡನ್‌ನಿಂದ ಅಧಿಕಾರಿಗಳು ಆಗಮಿಸಲಿದ್ದಾರೆ.

ತುಮಕೂರು, ಮೇ 18: ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶವು ಮೇ 19 ಬೆಳಗ್ಗೆ 11 ಗಂಟೆಗೆ ತುಮಕೂರಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿರುವುದು ಹಾಗೂ ರಾಜ್ಯದಲ್ಲಿ 13.5 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿರುವುದು ಸರ್ಕಾರದ ಪ್ರಮುಖ ಸಾಧನೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯೊಂದರಲ್ಲೇ 1,52,492 ಜನರಿಗೆ ಹಕ್ಕುಪತ್ರ ನೀಡಲಾಗಿದ್ದು, ಆ ಮೂಲಕ ತುಮಕೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಈ ಸಾಧನೆಯು ಗಿನ್ನಿಸ್ ದಾಖಲೆಗೆ ಸೇರಿದೆ. ಹೀಗಾಗಿ ಪ್ರಮಾಣಪತ್ರ ನೀಡಲು ಗಿನ್ನಿಸ್ ಸಂಸ್ಥೆಯರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More