AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?: ಜಿಲ್ಲಾದ್ಯಂತ ಕಂದಾಯ ಸಿಬ್ಬಂದಿ ಧರಣಿ

ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?: ಜಿಲ್ಲಾದ್ಯಂತ ಕಂದಾಯ ಸಿಬ್ಬಂದಿ ಧರಣಿ

ಅಕ್ಷಯ್​ ಪಲ್ಲಮಜಲು​​
|

Updated on: Jul 04, 2026 | 10:10 PM

Share

ತುಮಕೂರು ಗ್ರಾಮ ಆಡಳಿತ ಅಧಿಕಾರಿ ಭುವನಾ ನಿಧನರಾಗಿದ್ದು, ಎಸ್ಐಆರ್ ಕರ್ತವ್ಯದ ಒತ್ತಡದಿಂದ ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘವು ಅಧಿಕಾರಿಗಳ ಕಿರುಕುಳ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಒಂದು ಕೋಟಿ ರೂಪಾಯಿ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದೆ.

ತುಮಕೂರು,ಜು.4: ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರು ಎಸ್ಐಆರ್ ಕರ್ತವ್ಯಕ್ಕೆ ತೆರಳುವಾಗ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಅಧಿಕಾರಿಗಳ ವಿಪರೀತ ಕೆಲಸದ ಒತ್ತಡ ಮತ್ತು ಕಿರುಕುಳವೇ ಅವರ ಸಾವಿಗೆ ಕಾರಣ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಆರೋಪಿಸಿದೆ. ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಮಾತನಾಡಿ, ಬೆಳಗಿನ ಜಾವ 6:30ರ ಸುಮಾರಿಗೆ ಮೇಲಾಧಿಕಾರಿಗಳ ಒತ್ತಡದಿಂದ ಕೆಲಸಕ್ಕೆ ತೆರಳುತ್ತಿದ್ದ ಭುವನಾ ಅವರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಅತಿಯಾದ ಕೆಲಸದ ಬೇಡಿಕೆ ಮತ್ತು ಹಗಲು-ರಾತ್ರಿ ದುಡಿಸಿಕೊಳ್ಳುವ ಪ್ರವೃತ್ತಿಯನ್ನು ಅವರು ಖಂಡಿಸಿದ್ದಾರೆ. ಸರ್ಕಾರಿ ನೌಕರರ ಕಾರ್ಯಾವಧಿ ಬೆಳಗ್ಗೆ 10 ರಿಂದ ಸಂಜೆ 5:30 ರವರೆಗೆ ಇರಬೇಕು ಎಂಬ ಸುತ್ತೋಲೆ ಇದ್ದರೂ, ರಾತ್ರಿ 10-11 ಗಂಟೆಯವರೆಗೆ ಸಭೆಗಳನ್ನು ನಡೆಸುವುದು ಮತ್ತು ಬೆಳಿಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡುವುದು ಅವೈಜ್ಞಾನಿಕ ಎಂದು ಯೋಗೇಶ್ ನಾಯಕ್ ತಿಳಿಸಿದ್ದಾರೆ. ಈ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು, ಭುವನಾ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ತುಮಕೂರು ಜಿಲ್ಲೆಯ 500ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಘೋಷಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us