ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶ; 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 03, 2024 | 9:17 PM

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ (Ankasandra) ಗ್ರಾಮದಲ್ಲಿ ನಡೆದಿದೆ. ಈ ವೇಳೆ 1 ಲಕ್ಷ ಕೊಬ್ಬರಿ ಸೇರಿ 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರು, ಮೇ.03: ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ(Ankasandra) ಗ್ರಾಮದ ಪಾಪಣ್ಣ ಎಂಬುವರಿಗೆ ಸೇರಿದ ಶೆಡ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾಗಿದೆ. ಆಕಸ್ಮಿಕ ಬೆಂಕಿ ತಗುಲಿ 1 ಲಕ್ಷ ಕೊಬ್ಬರಿ, 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on