ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ

ಮಹೇಶ್ ಇ, ಭೂಮನಹಳ್ಳಿ Edited By: ವಿವೇಕ ಬಿರಾದಾರ

Updated on: Oct 21, 2024 | 1:10 PM

ಗೃಹ ಸಚಿವ ಡಾ.ಜಿ.ಪರಮೇಶ್ವರ್ ತವರು ಜಿಲ್ಲೆಯ ಪೊಲೀಸ್ ಠಾಣೆ ಮಳೆಗೆ ಸೋರುತ್ತಿದೆ. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸರು ಪರದಾಡುತ್ತಿದ್ದಾರೆ.

ತುಮಕೂರು, ಅಕ್ಟೋಬರ್​ 21: ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parmeshwara) ತವರು ಜಿಲ್ಲೆಯಲ್ಲಿ ಪೊಲೀಸ್ ಠಾಣೆಯೊಂದು (Police Station) ಮಳೆಗೆ ಸೋರುತ್ತಿದೆ. ತುಮಕೂರು (Tumakur) ನಗರದ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸರು ಪರದಾಡುತ್ತಿದ್ದಾರೆ.

ಠಾಣೆಯಲ್ಲಿನ ಕಂಪ್ಯೂಟರ್‌ಗಳು, ಯುಪಿಎಸ್ ಬ್ಯಾಟರಿಗಳು ಸೇರಿದಂತೆ ಕಡತಗಳು ಮಳೆ ನೀರಿಗೆ ಹಾಳಾಗುತ್ತಿವೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಯ ಪರಿಸ್ಥಿತಿ ಹೀಗಾದರೆ ಬೇರೆ ಕಡೆ ಠಾಣೆಗಳ ಸ್ಥಿತಿ ಹೇಗಿದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಜಯನಗರ ಪೊಲೀಸ್ ಠಾಣೆ ನಡೆಯುತ್ತಿರುವ ಕಟ್ಟಡ ಹಳೆಯದಾಗಿದೆ. ಕಟ್ಟಡದ ಸಿಮೆಂಟ್ ಛಾವಣಿಯಿಂದ ಮಳೆಯ ನೀರು ಜಿನುಗುತ್ತಿದೆ. ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಮಳೆ ನೀರಿನಿಂದ ನಮ್ಮನ್ನು ರಕ್ಷಿಸಿ ಎನ್ನುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...