ತುಮಕೂರು: ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್​​ ಧಿಡೀರ್​ ಭೇಟಿ, ವಾರ್ಡನ್​ಗೆ ಖಡಕ್ ವಾರ್ನಿಂಗ್

Edited By:

Updated on: Sep 30, 2023 | 2:36 PM

ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿ ನಿಲಯಕ್ಕೆ ಎಸಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಧಿಡೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳು ವಾರ್ಡನ್ ಸಂಜೆಯ ವೇಳೆ ಇಲ್ಲದೇ ಇರುವ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದು ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ತುಮಕೂರು, ಸೆ.2023: ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿ ನಿಲಯಕ್ಕೆ ಎಸಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಧಿಡೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ದಿಢೀರ್​ ಭೇಟಿಗೆ ಹಾಸ್ಟೆಲ್​ ಸಿಬ್ಬಂದಿಗ ತಬ್ಬಿಬ್ಬಾಗಿದ್ದು ಅಧಿಕಾರಿಗಳು ಹಾಸ್ಟೆಲ್​ನ ಅಡುಗೆ ಕೊಠಡಿ, ಶೌಚಾಲಯ, ವಿದ್ಯಾರ್ಥಿಗಳ ಕೊಠಡಿಗಳ ಪರಿಶೀಲನೆ ಮಾಡಿದ್ದಾರೆ. ಹಾಗೂ ಹಾಸ್ಟೆಲ್​ನಲ್ಲಿ ವಿದ್ಯಾಭ್ಯಾಸದ ಬಗ್ಗೆ ಮಕ್ಕಳೊಂದಿಗೆ ಚರ್ಚೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳು ವಾರ್ಡನ್ ಸಂಜೆಯ ವೇಳೆ ಇಲ್ಲದೇ ಇರುವ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದು ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us