ತುಮಕೂರು: ಹುಡುಗಿ ವಿಚಾರಕ್ಕೆ ಹಲ್ಲೆಗೆ ಸ್ಕೆಚ್! ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ, ಪುಂಡರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
Tumkur Police: ಮಾರಕಾಸ್ತ್ರಗಳ ಸಹಿತ ಲಾಂಗು, ಮಚ್ಚು ಹಿಡಿದು ಹಲ್ಲೆ ನಡೆಸಲು ಹೊಂಚು ಹಾಕ್ತಿದ್ದರು. ಇದನ್ನ ಗಮನಿಸಿ ಪುಂಡರನ್ನ ಮಾರಕಾಸ್ತ್ರಗಳ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೊಸಪಾಳ್ಯ ಗ್ರಾಮಸ್ಥರು ಆ ಪುಂಡರನ್ನು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ (Tumkur Police). ಹಲ್ಲೆ ಮಾಡಲು ಯತ್ನಿಸಿದ 6 ಜನ ಪುಂಡರನ್ನ ಚಿಕ್ಕನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುಂಡರ ಬಳಿಯಿದ್ದ ಮಚ್ಚು, ಲಾಂಗು, ಸೇರಿದಂತೆ ಹಲವು ಮಾರಕಾಸ್ತ್ರಗಳು ಪೊಲೀಸರ ವಶವಾಗಿವೆ.
ತುಮಕೂರು, ಆಗಸ್ಟ್ 24: ಗ್ರಾಮಸ್ಥರ (Villagers) ಸಮಯಪ್ರಜ್ಞೆಯಿಂದ ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಹಲ್ಲೆ ಮಾಡಲು ಮಾರಕಾಸ್ತ್ರಗಳ ಸಹಿತ ಬಂದ ಪುಂಡರನ್ನ ಸ್ವತಃ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಹೊಸಪಾಳ್ಯ ಗ್ರಾಮದ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ತುಮಕೂರು ಮೂಲದ ಪುಂಡರ ಗುಂಪು ಹೊಸಪಾಳ್ಯ ಯುವಕರಿಗೆ ಥಳಿಸಲು ಸ್ಕೇಚ್ ಹಾಕಿತ್ತು (Assault).
ಆಗಿದ್ದೇನು?: ಮಾರಕಾಸ್ತ್ರಗಳ ಸಹಿತ ಲಾಂಗು, ಮಚ್ಚು ಹಿಡಿದು ಹಲ್ಲೆ ನಡೆಸಲು ಹೊಂಚು ಹಾಕ್ತಿದ್ದರು. ಇದನ್ನ ಗಮನಿಸಿ ಪುಂಡರನ್ನ ಮಾರಕಾಸ್ತ್ರಗಳ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೊಸಪಾಳ್ಯ ಗ್ರಾಮಸ್ಥರು ಆ ಪುಂಡರನ್ನು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ (Tumkur Police). ಹಲ್ಲೆ ಮಾಡಲು ಯತ್ನಿಸಿದ 6 ಜನ ಪುಂಡರನ್ನ ಚಿಕ್ಕನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುಂಡರ ಬಳಿಯಿದ್ದ ಮಚ್ಚು, ಲಾಂಗು, ಸೇರಿದಂತೆ ಹಲವು ಮಾರಕಾಸ್ತ್ರಗಳು ಪೊಲೀಸರ ವಶವಾಗಿವೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಹುಡುಗಿ ವಿಚಾರಕ್ಕೆ ಹೊಸಪಾಳ್ಯ ಯುವಕರಿಗೆ ಹಲ್ಲೆ ನಡೆಸಲು ಬಂದಿದ್ದರು ಎನ್ನಲಾಗ್ತಿದೆ. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 24, 2023 10:11 AM
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
