ತುಮಕೂರು: ನಡು ರಸ್ತೆಯಲ್ಲೇ ಯುವಕರ ವೀಲಿಂಗ್ ಹುಚ್ಚಾಟ; ಅಪಾಯಕಾರಿ ದೃಶ್ಯ ಮೊಬೈಲ್​ನಲ್ಲಿ ಸೆರೆ

Edited By:

Updated on: Mar 23, 2024 | 2:19 PM

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ.

ತುಮಕೂರು, ಮಾ.23: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ. ಇದರಿಂದ ಸಹ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.  ಈ ಅಪಾಯಕಾರಿ ವೀಲ್ಹಿಂಗ್ ದೃಶ್ಯ ಕಾರಿನಲ್ಲಿ ತೆರಳುತ್ತಿದ್ದವರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ನಡುರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೇ  ಯುವಕರು ವೀಲ್ಹಿಂಗ್ ಮಾಡಿದ್ದಾರೆ. ಈ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 23, 2024 02:19 PM
Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More