ಕೊಪ್ಪಳ, ಆಗಸ್ಟ್ 15: ಕೊಪ್ಪಳ ಜಿಲ್ಲೆ ಮುನಿರಾಬಾದ್ನಲ್ಲಿ ತುಂಗಾಭದ್ರಾ ಜಲಾಶಯದ (Tunga Bhadra Dam) 19ನೇ ಗೇಟ್ ಮುರಿದು ನೀರು ಪೋಲಾಗುತ್ತಿದೆ. ಇದೀಗ ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ. ರಭಸವಾಗಿ ಹರಿಯುವ ನೀರಿನ ಮಧ್ಯೆ ಜಲಾಶಯಕ್ಕೆ ಇಳಿದು ಓರ್ವ ಸಿಬ್ಬಂದಿ ಕೆಲಸ ಆರಂಭಿಸಿದ್ದಾರೆ. ಎಲಿಮೆಂಟ್ ಅಳವಡಿಕೆಗಿದ್ದ ಕೆಲ ಅಡ್ಡಿಯನ್ನು ಸಿಬ್ಬಂದಿ ನಿವಾರಿಸುತ್ತಿದ್ದಾರೆ. ಜಲಾಶಯಕ್ಕೆ ಧಕ್ಕೆ ಆಗದಂತೆ ಗೇಟ್ ಅಳವಡಿಕೆಗೆ ಹರಸಾಹಸ ಪಡುತ್ತಿದ್ದಾರೆ. ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಅಳವಡಿಕೆ ಕಾರ್ಯದ ನೇರಪ್ರಸಾರ ವೀಕ್ಷಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published On - 5:52 pm, Thu, 15 August 24