ವಿಜಯನಗರ, (ಆಗಸ್ಟ್ 12): ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದರಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಬರದಿಂದ ಕೆಂಗೆಟ್ಟಿದ್ದ ರೈತರು ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ಎರಡು ಬೆಳೆ ತೆಗೆಯಬಹುದು ಎಂದು ಫುಲ್ ಖುಷ್ ಆಗಿದ್ದರು. ಆದ್ರೆ, ಡ್ಯಾಂನ ಕ್ರಸ್ಟ್ ಗೇಟ್ 19 ಕಟ್ ಆಗಿದ್ದು, ಇದೀಗ ಅರ್ಧ ನೀರು ಜಲಾಶಯದಿಂದ ಖಾಲಿ ಮಾಡಬೇಕಿದೆ. ಹೀಗಾಗಿ ಜಲಕ್ಷಾಮ ಎದುರಾಗುವ ಆತಂಕ ರೈತರಲ್ಲಿ ಮನೆ ಮಾಡಿದೆ. ಇನ್ನೊಂದೆಡೆ ಹೊಸ ಕ್ರಸ್ಟ್ ಗೇಟ್ ನಿರ್ಮಾಣ ಕಾರ್ಯ ಸಹ ಭರದಿಂದ ಸಾಗಿದೆ. ಹೊಸಪೇಟೆಯ ಇಂಡಸ್ಟ್ರಿಯಲ್ ಏರಿಯಾದ ನಾರಾಯಣ ಇಂಜಿನಿಯರಿಂಗ್ ವರ್ಕ್ಸ್ನಲ್ಲಿ ಗೇಟ್ ನಿರ್ಮಾಣ ಕಾರ್ಯ ನಡೆಯುತ್ತಿದೆ. 19. 230 ಮೀಟರ್ ಉದ್ದ, 1.250 ಮೀಟರ್ ಅಗಲ ಮತ್ತು ದಪ್ಪ ಗಾತ್ರದ ಕಬ್ಬಿಣದ ಗೇಟ್ ನಿರ್ಮಾಣವಾಗುತ್ತಿದ್ದು, 10 ದಿನದೊಳಗೆ ಗೇಟ್ ಅಳವಡಿಸಲು ಪ್ಲ್ಯಾನ್ ಮಾಡಲಾಗಿದೆ.
ಇದನ್ನೂ ಓದಿ: ಭರದಿಂದ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ನಿರ್ಮಾಣದ ಕಾರ್ಯ: ಗೇಟಿನ ಅಗಲ-ಉದ್ದ ಎಷ್ಟು? ಇಲ್ಲಿದೆ ವಿವರ