AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ

ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 05, 2026 | 2:43 PM

Share

ಮುಖ್ಯಾಂಶಗಳು

  • 3 ದಿನಗಳಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ
  • ಭರ್ತಿಯಾದ ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ನೀರು
  • ಸಂಪೂರ್ಣ ಬತ್ತಿಹೋಗಿದ್ದ ತುಂಗಾ ನದಿಗೆ ಮತ್ತೆ ಜೀವ ಕಳೆ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ.

ದಾವಣಗೆರೆ, (ಜುಲೈ 05): ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗೊ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ. ಇದರಿಂದ 10 ಗೇಟ್ ಓಪನ್ ಮಾಡಿ 20 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದ್ದು. ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ಎರಡು ಮೂರು ದಿನಗಳ ಹಿಂದ ಸಂಪೂರ್ಣ ಖಾಲಿಯಾಗಿದ್ದ ತುಂಗಭದ್ರ ನದಿಗೆ ಕೊನೆಗೂ ನೀರು ಬಿಟ್ಟಿರಿವುದರಿಂದ ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ, ನ್ಯಾಮತಿ ತಾಲೂಕಿನ ಜನರು ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us