AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಾಂತರಿ ಸಿದ್ದರಾಮಯ್ಯ ಹಿಂದೊಮ್ಮೆ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು: ಆರ್ ಅಶೋಕ, ಬಿಜೆಪಿ ಶಾಸಕ

ಪಕ್ಷಾಂತರಿ ಸಿದ್ದರಾಮಯ್ಯ ಹಿಂದೊಮ್ಮೆ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು: ಆರ್ ಅಶೋಕ, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 11, 2023 | 5:09 PM

Share

ಹಿಂದೆ ತಮ್ಮ ತವರು ಕ್ಷೇತ್ರ ಮೈಸೂರಿಂದಲೇ ಬಹಳ ಕಷ್ಟಪಟ್ಟು ಗೆದ್ದಿದ್ದ ಸಿದ್ದರಾಮಯ್ಯ ಈಗ ಚುನಾವಣೆ ನಡೆದರೂ ಸೋಲುವುದು ಗ್ಯಾರಂಟಿ ಎಂದ ಅಶೋಕ; ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನ ಮಂತ್ರಿಯಾಗೋದನ್ನು ಯಾರಿಂದಲೂ ತಪ್ಪಿಸಲಾಗದು ಎಂದರು.

ಮೈಸೂರು: ಪ್ರಪಂಚದಲ್ಲೇ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿ ಬಗ್ಗೆ ಕಾಮೆಂಟ್ ಮಾಡುವ ನೈತಿಕ ಅಧಿಕಾರ ಸಿದ್ದರಾಮಯ್ಯನವರಿಗಿಲ್ಲ (Siddaramaiah) ಎಂದು ಬಿಜೆಪಿ ಶಾಸಕ ಆರ್ ಅಶೋಕ (R Ashoka) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಶೋಕ, ಸಿದ್ದರಾಮಯ್ಯ ಒಬ್ಬ ಪಕ್ಷಾಂತರಿ; ಮೊದಲು ಸ್ವತಂತ್ರ (independent) ಅಭ್ಯರ್ಥಿಯಾಗಿ ರಾಜಕೀಯಕ್ಕೆ ಬಂದು ಅದ್ಯಾವುದೊ ಸಮಾಜವಾದ ಪಕ್ಷ ಸೇರಿ, ನಂತರ ಜೆಡಿಎಸ್ ಗೆ ಬಂದು ಈಗ ಕಾಂಗ್ರೆಸ್ ನಲ್ಲಿದ್ದಾರೆ, ಮುಂದೆ ಯಾವ ಪಕ್ಷದ ಕಡೆ ವಾಲುತ್ತಾರೋ ಗೊತ್ತಿಲ್ಲ ಎಂದರು. ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಿಜೆಪಿಯಿಂದಲೂ ಫಲ ಉಂಡಿದ್ದಾರೆ, ಅಧಿಕಾರ ಸಿಗುವ ಕಡೆ ಹೋಗುವ ಜಾಯಮಾನ ಅವರದ್ದು ಎಂದು ಬಿಜೆಪಿ ಶಾಸಕ ಹೇಳಿದರು. ಹಿಂದೆ ತಮ್ಮ ತವರು ಕ್ಷೇತ್ರ ಮೈಸೂರಿಂದಲೇ ಬಹಳ ಕಷ್ಟಪಟ್ಟು ಗೆದ್ದಿದ್ದ ಸಿದ್ದರಾಮಯ್ಯ ಈಗ ಚುನಾವಣೆ ನಡೆದರೂ ಸೋಲುವುದು ಗ್ಯಾರಂಟಿ ಎಂದ ಅಶೋಕ; ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನ ಮಂತ್ರಿಯಾಗೋದನ್ನು ಯಾರಿಂದಲೂ ತಪ್ಪಿಸಲಾಗದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.