ಕೊಲೆ ಕೇಸ್ನಲ್ಲಿ 11 ವರ್ಷ ಜೈಲು ಶಿಕ್ಷೆ ಹಾಗೂ ದರ್ಶನ್ ಭೇಟಿ ಬಗ್ಗೆ ಖೈದಿ ಹೇಳಿದ್ದೇನು?
ಕೊಲೆ ಪ್ರಕರಣದಲ್ಲಿ ತುರುವನೂರು ಸಿದ್ದಾರೂಢ ಅವರು ಜೈಲು ಸೇರಿದ್ದರು. ಅವರಿಗೆ 11 ವರ್ಷ ಜೈಲು ಶಿಕ್ಷೆ ಆಗಿತ್ತು. ದರ್ಶನ್ ಅವರ ಅಭಿಮಾನಿ ಆಗಿರುವ ಸಿದ್ದಾರೂಢಾ ಅವರು ಜೈಲಿನ ದಿನಗಳ ಬಗ್ಗೆ ಕೆಲವು ಮಾಹಿತಿ ತೆರೆದಿಟ್ಟಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಬೇಕು ಎಂಬುದು ಅವರ ಆಸೆ ಆಗಿತ್ತು. ಈಗ ತುರುವನೂರು ಸಿದ್ದಾರೂಢ ಬಿಡುಗಡೆ ಆಗಿ ಬಂದಿದ್ದಾರೆ.
ಪ್ರಸಿದ್ಧ ನಟ ದರ್ಶನ್ ಅವರು ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರನ್ನು ಇನ್ನೋರ್ವ ಖೈದಿ ಭೇಟಿ ಮಾಡಿದ್ದಾರೆ. ಹೌದು, ಕೊಲೆ ಕೇಸ್ನಲ್ಲಿ 11 ವರ್ಷ ಜೈಲು ವಾಸ ಅನುಭವಿಸಿ ಬಂದಿರುವ ತುರುವನೂರು ಸಿದ್ದಾರೂಢ ಅವರು ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಅವರು ಎಕ್ಸ್ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ‘ಕರಿಯ’ ಸಿನಿಮಾದ ಶೂಟಿಂಗ್ ನೋಡಿದ್ದ ಅವರು ಆ ಬಳಿಕ ಜೈಲಿಗೆ ಹೋಗಿದ್ದರು. ಜೈಲು ಶಿಕ್ಷೆ ಮುಗಿಸಿ ಹೊರಗೆ ಬರುವುದಕ್ಕೂ ಮುನ್ನ ಜೈಲಿನಲ್ಲಿ ದರ್ಶನ್ ಅವರನ್ನು ನೋಡಿದ್ದರ ಕುರಿತು ಅನುಭವವನ್ನು ತುರುವನೂರು ಸಿದ್ದಾರೂಢ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

