ಪ್ರಸಿದ್ಧ ನಟ ದರ್ಶನ್ ಅವರು ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರನ್ನು ಇನ್ನೋರ್ವ ಖೈದಿ ಭೇಟಿ ಮಾಡಿದ್ದಾರೆ. ಹೌದು, ಕೊಲೆ ಕೇಸ್ನಲ್ಲಿ 11 ವರ್ಷ ಜೈಲು ವಾಸ ಅನುಭವಿಸಿ ಬಂದಿರುವ ತುರುವನೂರು ಸಿದ್ದಾರೂಢ ಅವರು ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಅವರು ಎಕ್ಸ್ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ‘ಕರಿಯ’ ಸಿನಿಮಾದ ಶೂಟಿಂಗ್ ನೋಡಿದ್ದ ಅವರು ಆ ಬಳಿಕ ಜೈಲಿಗೆ ಹೋಗಿದ್ದರು. ಜೈಲು ಶಿಕ್ಷೆ ಮುಗಿಸಿ ಹೊರಗೆ ಬರುವುದಕ್ಕೂ ಮುನ್ನ ಜೈಲಿನಲ್ಲಿ ದರ್ಶನ್ ಅವರನ್ನು ನೋಡಿದ್ದರ ಕುರಿತು ಅನುಭವವನ್ನು ತುರುವನೂರು ಸಿದ್ದಾರೂಢ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.