AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್

ಶಿವಕುಮಾರ್ ಪತ್ತಾರ್
| Edited By: |

Updated on: Apr 25, 2026 | 8:43 PM

Share

ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.

ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.

ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್​ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ ನೀರನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಕಾರ್ಖಾನೆಗಳು ಮೋಟರ್ ಗಳ ಮೂಲಕ ಅನಧಿಕೃತವಾಗಿ ನೀರು ತಗೆದುಕೊಳ್ಳುತ್ತಿದ್ದವು. ಈ ಸಂಬಂಧ ಕಳೆದ ಎರಡು ದಿನಗಳ ಹಿಂದೆ ಟಿವಿ9 ವಿಸ್ತ್ರತ ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ನೀರಾವರಿ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳಿಗೆ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿಸಿದ್ದಾರೆ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More