ರಾಯಚೂರಿನಲ್ಲಿ ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಡಿಸಿ ಪೂವಿತಾ ಖಡಕ್ ಸೂಚನೆ

Edited By:

Updated on: May 29, 2026 | 1:25 PM

ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ರಾಯಚೂರು, ಮೇ 29: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ.

ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಒಂದು ಬಂಕ್ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಡಿಸಿ ಪೂವಿತಾ, “ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ. ಬಂಕ್ ಮಾಲೀಕರು ನಿಯಮ ಪಾಲಿಸದಿದ್ದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us