ಭಾರತದ ಸಾಫ್ಟ್ ಪವರ್​ ಬಗ್ಗೆ ಟಿವಿ9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಮಾತು

Updated on: Feb 25, 2024 | 6:25 PM

What India Thinks Today Global Summit: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಗ್ಲೋಬಲ್ ಸಮಿಟ್​ಗೆ ಚಾಲನೆ ನೀಡಿ ಮಾತನಾಡಿದ ಟಿವಿ9 ನೆಟ್​ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್​​ ಭಾರತ ವಿಶ್ವದಲ್ಲೇ ಸಾಫ್ಟ್​ ಪವರ್​ ಆಗಿ ಬೆಳೆಯುವುದರ ಬಗ್ಗೆ ಮಾತನಾಡಿದರು. ಅಮೇರಿಕನ್ ರಾಜಕೀಯ ವಿಜ್ಞಾನಿ ಜೋಸೆಫ್ ನೈ ಅವರ ಪ್ರಕಾರ, ಬಲದ ಬದಲಿಗೆ ಆಕರ್ಷಿಸುವ ಮತ್ತು ಮನವೊಲಿಸುವ ಮೂಲಕ ದೇಶವು ತನ್ನ ದೃಷ್ಟಿಕೋನವನ್ನು ಒಪ್ಪಿಕೊಳ್ಳುವಂತೆ ಮಾಡಿದರೆ ಅದನ್ನು ಸಾಫ್ಟ್ ಪವರ್​ ಎಂದು ಕರೆಯಲಾಗುತ್ತದೆ ಎಂದು ಉಲೇಖಿಸಿದ್ದಾರೆ.

ದೆಹಲಿ, ಫೆಬ್ರವರಿ 25: ಟಿವಿ9 ನೆಟ್‌ವರ್ಕ್ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today Global Summit) ಗ್ಲೋಬಲ್ ಸಮಿಟ್​ನ ಎರಡನೇ ಆವೃತ್ತಿಯನ್ನು ಆಯೋಜಿಸಲಾಗಿದೆ. ಇಂದು ಫೆಬ್ರವರಿ 25 ರಿಂದ ಫೆಬ್ರವರಿ 27 ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಸಿದ್ಧ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಗ್ಲೋಬಲ್ ಸಮಿಟ್​ಗೆ ಚಾಲನೆ ನೀಡಿ ಮಾತನಾಡಿದ ಟಿವಿ9 ನೆಟ್​ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das), ಭಾರತ ವಿಶ್ವದಲ್ಲೇ ಸಾಫ್ಟ್​ ಪವರ್​ ಆಗಿ ಬೆಳೆಯುವುದರ ಬಗ್ಗೆ ಮಾತನಾಡಿದರು. ‘ಸಾಫ್ಟ್ ಪವರ್’​ ಎಂಬ ಪದವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಅಮೇರಿಕನ್ ರಾಜಕೀಯ ವಿಜ್ಞಾನಿ ಜೋಸೆಫ್ ನೈ ಅವರ ಪ್ರಕಾರ, ಬಲದ ಬದಲಿಗೆ ಆಕರ್ಷಿಸುವ ಮತ್ತು ಮನವೊಲಿಸುವ ಮೂಲಕ ದೇಶವು ತನ್ನ ದೃಷ್ಟಿಕೋನವನ್ನು ಒಪ್ಪಿಕೊಳ್ಳುವಂತೆ ಮಾಡಿದರೆ ಅದನ್ನು ಸಾಫ್ಟ್ ಪವರ್​ ಎಂದು ಕರೆಯಲಾಗುತ್ತದೆ ಎಂದು ಉಲೇಖಿಸಿದ್ದಾರೆ. ಭಾರತವು ಈಗ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದ್ದಂತೆ ಉನ್ನತ ಸ್ಥಾನವನ್ನು ಪಡೆಯುತ್ತಿದೆ. ಕ್ರೀಡೆಗಳು, ಚಲನಚಿತ್ರಗಳು ಮತ್ತು ಸಂಗೀತ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಮೂಲಕ ಭಾರತಕ್ಕೆ ಅಪಾರ ಅವಕಾಶಗಳಿವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More