AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ

ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jan 07, 2026 | 5:55 PM

Share

ಬಾಗಲಕೋಟೆಯಲ್ಲಿ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದೆ. ಕಿತ್ತುಹೋದ ಮೆಟ್ಟಿಲುಗಳು, ತುಕ್ಕು ಹಿಡಿದ ಭಾಗಗಳು ಮತ್ತು ಹಳೆಯ ವಯಸ್ಸಿನ ಡಕೋಟಾ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸಂಕಟ ಅನುಭವಿಸುತ್ತಿದ್ದಾರೆ. ಶಕ್ತಿ ಯೋಜನೆಯಿಂದ ಹೆಚ್ಚಿದ ಜನಸಂದಣಿಯಿಂದಾಗಿ ಸುರಕ್ಷತೆ ಅಪಾಯಕ್ಕೊಳಗಾಗಿದೆ. ಹೊಸ ಬಸ್​ಗಳಿಗೆ ಪ್ರಯಾಣಿಕರ ಆಗ್ರಹವಿದೆ.

ಬಾಗಲಕೋಟೆ, ಜ.7: ಟಿವಿ9 ರಿಯಾಲಿಟಿ ಚೆಕ್ ಮೂಲಕ ಬಾಗಲಕೋಟೆಯಲ್ಲಿ ಸರ್ಕಾರಿ ಬಸ್​ಗಳ ದುಸ್ಥಿತಿಯು ಬೆಳಕಿಗೆ ಬಂದಿದೆ. ಡಕೋಟಾ ಬಸ್ ಎಂದು ಕರೆಯಲ್ಪಡುವ ಹಳೆಯ ಮತ್ತು ಕಿತ್ತುಹೋದ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸಂಕಟ ಅನುಭವಿಸುತ್ತಿದ್ದಾರೆ. ಮೆಟ್ಟಿಲುಗಳು ಮುರಿದು, ಬಸ್​ನ ಟಾಪ್ ಹಾರುವ ಸ್ಥಿತಿಯಲ್ಲಿ, ಲೈಟ್​ಗಳು ಕಾರ್ಯನಿರ್ವಹಿಸದೆ, ತುಕ್ಕು ಹಿಡಿದ ಬಸ್‌ಗಳು ಅಪಾಯಕಾರಿ ಪ್ರಯಾಣಕ್ಕೆ ಕಾರಣವಾಗಿವೆ. ಒಂದು ಬಸ್ 14 ವರ್ಷ 10 ತಿಂಗಳು ಹಳೆಯದಾಗಿದ್ದು, ಅದರ ವೈರಿಂಗ್ ಸಹ ಹೊರಬಿದ್ದಿರುವ ದೃಶ್ಯ ಕಂಡುಬಂದಿದೆ. ಸಾರಿಗೆ ಇಲಾಖೆಗೆ ಉತ್ತಮ ಹೆಸರಿದ್ದರೂ, ಬಾಗಲಕೋಟೆಯ ನವನಗರ ಬಸ್ ನಿಲ್ದಾಣದಲ್ಲಿರುವ ಬಸ್​ಗಳ ಸ್ಥಿತಿ ಚಿಂತಾಜನಕವಾಗಿದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್​ಗಳಲ್ಲಿ ಮಹಿಳೆಯರ ದಟ್ಟಣೆ ಹೆಚ್ಚಿದ್ದು, 50-60 ಜನರ ಸಾಮರ್ಥ್ಯದ ಬಸ್​ಗಳಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದಾರೆ. ಇದರಿಂದ ಸುರಕ್ಷತೆಗೆ ಧಕ್ಕೆಯಾಗುತ್ತಿದೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಿಗೆ ಹಳೆಯ ಬಸ್​ಗಳನ್ನು ಬದಲಾಯಿಸಿ ಹೊಸ, ಸುರಕ್ಷಿತ ಬಸ್​ಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಇದು ಪ್ರಯಾಣಿಕರ ಜೀವದ ಸುರಕ್ಷತೆಯ ವಿಷಯ ಎಂದು ಅವರು ಒತ್ತಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 07, 2026 05:55 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More