ದರ್ಶನ್ ತೂಗುದೀಪ: ಬೆಂಗಳೂರು-ಬಳ್ಳಾರಿವರೆಗೆ ಪೊಲೀಸ್ ವ್ಯಾನಲ್ಲಿ ಪ್ರಯಾಣ ಹೇಗಿತ್ತು? ಇಲ್ಲಿದೆ ವಿವರಣೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2024 | 11:35 AM

Darshan Toogudeepa: ಪೊಲೀಸರು ಮಾಧ್ಯಮ ಮತ್ತು ಬೆಂಗಳೂರುನಿಂದ ಬಳ್ಳಾರಿವರೆಗೆ ರಸ್ತೆಯುದ್ದಕ್ಕೂ ನೆರೆದಿರಬಹುದಾದ ಅಭಿಮಾನಿಗಳ ಕಣ್ತಪ್ಪಿಸಲು ಮೊದಲಿಗೆ ನಿಶ್ಚಯಿಸಿದ್ದ ಅಥವಾ ಯೋಜಿಸಿದ್ದ ಮಾರ್ಗ ಬಿಟ್ಟು ದೇವನಹಳ್ಳಿ ವಿಮಾನ ನಿಲ್ದಾಣ, ಚಿಕ್ಕಬಳ್ಳಾಪುರ, ಜೋಳದ ರಾಶಿ ಮತ್ತು ಅನಂತಪುರ ಮೂಲಕ ಬಳ್ಳಾರಿ ತಲುಪಿದರು ಎಂದು ವರದಿಗಾರ ಹೇಳುತ್ತಾರೆ.

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿ ನಂಬರ್ 2 ಅಗಿರುವ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ಅವರನ್ನು ಬೆಂಗಳೂರು ಸೆಂಟ್ರಲ್ ಜೈಲಿನಿಂದ ಬಳ್ಳಾರಿಯ ಜೈಲಿಗೆ ಕರೆತಂದ ಸುಮಾರು 6 ಗಂಟೆಗಳ ಪ್ರಯಾಣದ ಬಗ್ಗೆ ಪೊಲೀಸ್ ವ್ಯಾನನ್ನು ಹಿಂಬಾಲಿಸಿಕೊಂಡು ಹೋದ ನಮ್ಮ ವರದಿಗಾರ ಬಳ್ಳಾರಿ ಸೆಂಟ್ರಲ್ ಜೈಲಿನ ಹೊರಭಾಗದಿಂದ ವಿವರಣೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ ತೂಗುದೀಪ: ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದಾಸನ ಎಂಟ್ರಿ ಹೇಗಿತ್ತು ನೋಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.