AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ’: ಸಿಎಂ ಸಿದ್ದರಾಮಯ್ಯ

‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ’: ಸಿಎಂ ಸಿದ್ದರಾಮಯ್ಯ

ಗಂಗಾಧರ​ ಬ. ಸಾಬೋಜಿ
|

Updated on: Jul 13, 2024 | 7:05 PM

Share

ಮುಡಾ ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ವಿಚಾರ. ಸದ್ಯ ಈ ಕುರಿತಾಗಿ ಟಿವಿ9 ಸೂಪರ್ ಎಕ್ಸ್​ಕ್ಲ್ಯೂಸಿವ್ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ. ಇದು ರಾಜಕೀಯ ದ್ವೇಷ, ದುರುದ್ದೇಶವಾಗಿ ಆರೋಪ ಮಾಡಲಾಗಿದೆ ಎಂದಿದ್ದಾರೆ.

ಬೆಂಗಳೂರು, ಜುಲೈ 13: ಮುಡಾ (MUDA) ಸೈಟ್ ಹಂಚಿಕೆ ವಿವಾದದಲ್ಲಿ ಯಾವ ಹಗರಣ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಟಿವಿ9 ಸೂಪರ್ ಎಕ್ಸ್​ಕ್ಲ್ಯೂಸಿವ್​ ಸಂದರ್ಶನದಲ್ಲಿ ಮಾತನಾಡಿದ ಅವರು, ಮಾತು ಆರಂಭಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಇದೊಂದು ಪ್ರಕರಣವೇ ಅಲ್ಲ. ವಿಪಕ್ಷಗಳ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದು ರಾಜಕೀಯ ದ್ವೇಷ, ದುರುದ್ದೇಶವಾಗಿ  ಆರೋಪ ಮಾಡಲಾಗುತ್ತಿದೆ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. ಇನ್ನು 1997ರಲ್ಲಿ ಮುಡಾ ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿರುವದರಿಂದ ಹಿಡಿದು ಭೂಮಿ ಖರೀದಿಸಿರುವವರೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.  

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More