ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್ಗೆ ವಂಚಿಸಿದ್ದವರು ಸಿಕ್ಕಿಬಿದ್ದರು
ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ 23 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಸಂಜನ್, ದಿವಾಕರ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಕರಣ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಬೆಂಗಳೂರು, (ಜೂನ್ 10): IPL ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ 23 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಸಂಜನ್, ದಿವಾಕರ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮೇ 17ರಂದು ಯುವ ಕ್ರಿಕೆಟಿಗ ರಾಕೇಶ್ ಯಡೊರೆಗೆ ವಂಚಿಸಿದ್ದರು. ಹೈದರಾಬಾದ್ ಗೆ ರಾಕೇಶ್ ತೆರಳಿದ್ದಾಗ ಕ್ರಿಕೆಟ್ ಆಡುತ್ತಿದ್ದ ರೀಲ್ಸ್ ಹಾಕಿದ್ದ. ಇದನ್ನು ಗಮನಿಸಿ ರಾಕೇಶ್ ಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ ಸೈಬರ್ ವಂಚಕರು,ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಮೆಸೇಜ್ ಮಾಡಿದ್ದರು. ನಂಬಿಕೆ ಬರಲು ರಾಕೇಶ್ ಯಡೊರೆಗೆ ಕೆಲವು ಸುಳ್ಳು ದಾಖಲೆ ಕಳುಹಿಸಿದ್ದರು. ಇದನ್ನು ನಂಬಿದ ರಾಕೇಶ್, ಆನ್ ಲೈನ್ ಮೂಲಕ 23 ಲಕ್ಷಕ್ಕೂ ಹೆಚ್ಚ ಹಣ ವರ್ಗಾಯಿಸಿದ್ದಾನೆ. ಬಳಿಕ ತಾನು ವಂಚನೆಗೊಳಗಾಗಿದ್ದು ತಡವಾಗಿ ಅರಿವಿಗೆ ಬಂದಿದೆ ಎಂದು ತಿಳಿಸಿದರು.
ಬಳಿಕ ರಾಕೇಶ್ ಯಡೊರೆ ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಗೆ ದೂರು ನೀಡಿದ್ದ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಉತ್ತರ ಪ್ರದೇಶ ಸುಲ್ತಾನ್ಪುರಕ್ಕೆ ತೆರಳಿ ಇಬ್ಬರನ್ನು ಬಂಧಿಸಿದ್ದು, ಸುಸಂಜನ್, ದಿವಾಕರ್ ಬಂಧಿಸಿ ಕರೆತಂದಿದ್ದಾರೆ. ಸದ್ಯ ಆರೋಪಿಗಳನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,
ಪ್ರಸ್ತುತ ಇಬ್ಬರು ಸೈಬರ್ ವಂಚಕರು ಹಿಂಡಲಗಾ ಸೆಂಟ್ರಲ್ ಜೈಲಿನಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

