ಸಚಿವರ ಎದುರಲ್ಲೇ ಚಾಮರಾಜನಗರದ ಇಬ್ಬರು ಶಾಸಕರ ಜಗಳ

Edited By:

Updated on: Nov 30, 2024 | 3:48 PM

ಸಚಿವರು ಹಾಗೂ ಅಧಿಕಾರಿಗಳ ಎದುರೇ ಇಬ್ಬರು ಕಾಂಗ್ರೆಸ್ ಶಾಸಕರ ನಡುವೆ ಮಾತಿನ ಮಲ್ಲಯುದ್ಧ ನಡೆದಿದೆ. ಚಾಮರಾಜನಗರ ಜಿಲ್ಲೆಯ ಇಬ್ಬರು ಪ್ರಬಲ ಸಚಿವ ಆಕಾಂಕ್ಷಿಗಳ ನಡುವೆ ವಾಗ್ದಾಳಿ ನಡೆದಿದೆ. ಕೆಡಿಪಿ ಸಭೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಹಾಗೂ ಶಾಸಕ ಎ.ಆರ್ ಕೃಷ್ಣಮೂರ್ತಿ ನಡುವೆ ಮಾತಿನ ಸಮರ ನಡೆದಿದೆ.

ಚಾಮರಾಜನಗರ: ಚಾಮರಾಜನಗರದಲ್ಲಿ ಸಚಿವರಾದ ಕೆ. ವೆಂಕಟೇಶ್ ಮತ್ತು ಎಚ್.ಸಿ. ಮಹದೇವಪ್ಪ ಭಾಗವಹಿಸಿದ್ದ ಕೆಡಿಪಿ ಸಭೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾದ ಕಾಂಗ್ರೆಸ್ ಸಚಿವರಾದ ಪುಟ್ಟರಂಗಶೆಟ್ಟಿ ಹಾಗೂ ಶಾಸಕ ಎ.ಆರ್ ಕೃಷ್ಣಮೂರ್ತಿ ನಡುವೆ ಮಾತಿನ ಸಮರ ನಡೆದಿದೆ. ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿ ಮತ್ತು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ ನಡುವಿನ ಅಸಮಾಧಾನ ಸ್ಫೋಟವಾಗಿದೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು ಶಾಸಕರು ಮಾತಿನ ಸಮರ ನಡೆಸಿದ್ದಾರೆ. ಕೆರೆ ನೀರು ತುಂಬಿಸುವ ಯೋಜನೆ ಬಗ್ಗೆ ಮಾತನಾಡುತ್ತಿದ್ದ ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅವರ ವಿರುದ್ಧ ಶಾಸಕ ಪುಟ್ಟರಂಗಶೆಟ್ಟಿ ಗರಂ ಆಗಿದ್ದಾರೆ. ನಾನು ಮಾತನಾಡುವುದು ತಪ್ಪು ಎನ್ನುವುದಾದರೆ ಕೆಡಿಪಿ ಮೀಟಿಂಗ್ ಯಾಕೆ ಮಾಡ್ತೀರಾ? ಇಲ್ಲಿಗೆ ನಾವೇಕೆ ಬರಬೇಕು? ಎಂದು ಕಾಂಗ್ರೆಸ್ ಶಾಸಕ ಎ‌.ಆರ್ ಕೃಷ್ಣಮೂರ್ತಿ ಕೂಡ ಕೂಗಾಡಿದ್ದಾರೆ. ಈ ಇಬ್ಬರು ಕೈ ಶಾಸಕರ ನಡುವಿನ ಮಾತಿನ ಜಟಾಪಟಿ ನೋಡಿ ಸಚಿವ ಕೆ. ವೆಂಕಟೇಶ್ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More