ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಗ್ರೇಟ್ ಎಸ್ಕೇಪ್

Edited By:

Updated on: Jul 28, 2025 | 5:01 PM

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದ ಏಕಾಏಕಿ ಜಲಾಶಯದಿಮದ ನದಿಗೆ ನೀರು ಬಿಡಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಕಿರುಸೇತುವೆ ಮೇಲೆ ನೀರು ಹತ್ತಿದ್ದರಿಂದ ಪ್ರಾಣಭಯದಲ್ಲಿ ಎರಡು ನಾಯಿಗಳು ಓಡೋಡಿ ದಡ ಸೇರಿಕೊಂಡಿವೆ.

ಕೊಪ್ಪಳ, (ಜುಲೈ 28): ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದ ಏಕಾಏಕಿ ಜಲಾಶಯದಿಮದ ನದಿಗೆ ನೀರು ಬಿಡಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಕಿರುಸೇತುವೆ ಮೇಲೆ ನೀರು ಹತ್ತಿದ್ದರಿಂದ ಪ್ರಾಣಭಯದಲ್ಲಿ ಎರಡು ನಾಯಿಗಳು ಓಡೋಡಿ ದಡ ಸೇರಿಕೊಂಡಿವೆ. ಹರಿಯುವ ನೀರಿಗೆ ಸವಾಲೊಡ್ಡಿ ಶ್ವಾನಗಳು ಸೇತುವೆ ದಾಟಿವೆ.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More