Karnataka Assembly Polls: ಕಲಬುರಗಿಯ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ, ಸ್ವಾಗತಿಸಿದ ಡಿಕೆ ಶಿವಕುಮಾರ್

Updated on: Apr 22, 2023 | 10:48 AM

ಚಿತ್ತಾಪುರದ ಮಾಜಿ ಬಿಜೆಪಿ ಶಾಸಕ ವಿಶ್ವನಾಥ್ ಪಾಟೀಲ್ ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ನೀಡಿದ್ದನ್ನು ವಿರೋಧಿಸಿದ್ದರು ಮತ್ತು ಅರವಿಂದ್ ಚೌಹಾನ್ ಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡನ್ನು ಒತ್ತಾಯಿಸಿದ್ದರು

ಬೆಂಗಳೂರು: ಕಲಬುರಗಿಯ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ (Vishwanath Patil) ಮತ್ತು ಅರವಿಂದ್ ಚೌಹಾನ್ (Aravind Chouhan) ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾನ್ ಚಿತ್ತಾಪುರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ನಿಮಗೆ ನೆನಪಿರಬಹುದು, ಚಿತ್ತಾಪುರದ ಮಾಜಿ ಬಿಜೆಪಿ ಶಾಸಕ ವಿಶ್ವನಾಥ್ ಪಾಟೀಲ್ ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ನೀಡಿದ್ದನ್ನು ವಿರೋಧಿಸಿದ್ದರು ಮತ್ತು ಅರವಿಂದ್ ಚೌಹಾನ್ ಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡನ್ನು ಒತ್ತಾಯಿಸಿದ್ದರು. ಆದರೆ, ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರಿಬ್ಬರು ಬಿಜೆಪಿ ತೊರೆದು ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More