ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಆಘಾತಕಾರಿ ಭವಿಷ್ಯ

Updated on: May 04, 2025 | 2:23 PM

ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಹಾಗೇ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು ಕೋಡಿಶ್ರೀ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆ, (ಮೇ 04): ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.

ಬಾಗಲಕೊಟೆಯಲ್ಲಿಂದು ಮಾತನಾಡಿರುವ ಕೋಡಿಮಠದ ಸ್ವಾಮೀಜಿ, ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದೆ. ಜಗತ್ತಿನ ಎರಡು ‌ಮೂರು ಜನ ಮಹಾನ್ ನಾಯಕರಿಗೆ ಅಪಮೃತ್ಯುವಿದೆ. ಕೊಲ್ಲಬಹುದು ಅಥವಾ ಅಪಘಾತದಲ್ಲಿ ಅವರು ‌ಸಾಯಬಹುದು ಎಂದು ಆಘಾತಕಾರಿ ಭವಿಷ್ಯ ಹೇಳಿದ್ದಾರೆ.