AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಡ್ಯೂಟಿ ನಿರಾಕರಿಸಿದ ಉಬರ್; ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ಚಾಲಕರು

ಬೊಮ್ಮನಹಳ್ಳಿ ಹೊಸೂರು ರಸ್ತೆಯ ಉಬರ್ ಹೆಡ್‌ಆಫೀಸ್‌ ಮುಂದೆ ಸಾವಿರಾರು ಕ್ಯಾಬ್ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿದ್ದಾರೆ. ಬಾಂಗ್ಲಾದೇಶ ಮೂಲದ ಡಿಎಲ್ ಇಲ್ಲದವರಿಗೂ ಕೆಲಸ ನೀಡುತ್ತಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ.ಅಷ್ಟೇ ಅಲ್ಲದೇ ಸ್ವಂತ ಕಾರುಗಳಿಗೆ ಮಾತ್ರ ಬಾಡಿಗೆ ಬುಕ್ಕಿಂಗ್ ನೀಡಿ, ಅಟ್ಯಾಚ್ ಮಾಡಿದ ವಾಹನಗಳಿಗೆ ಡ್ಯೂಟಿ ನೀಡುತ್ತಿಲ್ಲವೆಂದು ಚಾಲಕರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಚಾಲಕರು ಕಬ್ಬಿಣದ ರಾಡ್ನಿಂದ ಉಬರ್ ಕಂಪನಿ ಬಾಗಿಲು ತರೆಯಲು ಮುಂದಾಗಿದ್ದು, ಉಬರ್ ಕಂಪನಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಂದಿನ ಬಾಗಿಲಿನಿಂದ ಹೊರ ಹೋಗಿದ್ದಾರೆ.

Kiran Surya
| Edited By: |

Updated on:Nov 24, 2025 | 1:06 PM

Share

ಬೆಂಗಳೂರು, ನವೆಂಬರ್ 24: ಬೊಮ್ಮನಹಳ್ಳಿ ಹೊಸೂರು ರಸ್ತೆಯ ಉಬರ್ ಹೆಡ್‌ಆಫೀಸ್‌ ಮುಂದೆ ಸಾವಿರಾರು ಕ್ಯಾಬ್ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿದ್ದಾರೆ. ಬಾಂಗ್ಲಾದೇಶ ಮೂಲದ ಡಿಎಲ್ ಇಲ್ಲದವರಿಗೂ ಕೆಲಸ ನೀಡುತ್ತಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ.ಅಷ್ಟೇ ಅಲ್ಲದೇ ಸ್ವಂತ ಕಾರುಗಳಿಗೆ ಮಾತ್ರ ಬಾಡಿಗೆ ಬುಕ್ಕಿಂಗ್ ನೀಡಿ, ಅಟ್ಯಾಚ್ ಮಾಡಿದ ವಾಹನಗಳಿಗೆ ಡ್ಯೂಟಿ ನೀಡುತ್ತಿಲ್ಲವೆಂದು ಚಾಲಕರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಚಾಲಕರು ಕಬ್ಬಿಣದ ರಾಡ್ನಿಂದ ಉಬರ್ ಕಂಪನಿ ಬಾಗಿಲು ತರೆಯಲು ಮುಂದಾಗಿದ್ದು, ಉಬರ್ ಕಂಪನಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಂದಿನ ಬಾಗಿಲಿನಿಂದ ಹೊರ ಹೋಗಿದ್ದಾರೆ.

ಇತ್ತ ಬಾಡಿಗೆಯು ಇಲ್ಲ, ಅತ್ತ ಮಾಡಿರುವ ಸಾಲ ತೀರಿಸಲು ಆಗದೆ ಪರದಾಡುವಂತಾಗಿದೆ. ಒನ್ ಸಿಟಿ ಒನ್ ಫೇರ್ ಜಾರಿಯಾಲ್ಲಿದ್ದರೂ ಉಬರ್ ಕಂಪನಿ ಮಾತ್ರ ಪ್ರಯಾಣಿಕರಿಂದ ಅನಧಿಕೃತವಾಗಿ ದುಪ್ಪಟ್ಟು ದರ ಪಡೆಯುತ್ತಿದೆ. ಪೀಕ್ ಅವರ್ ನಲ್ಲಿ ಒಂದು ದರ, ನಾರ್ಮಲ್ ಅವರ್ ನಲ್ಲಿ ಒಂದು ದರ, ಮಳೆ ಬಂದಾಗ ಒಂದು ದರ ಎಂದು ಮನ ಬಂದಂತೆ ಹಣ ಪಡೆಯುತ್ತಿದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ವೇಳೆ ಸ್ಥಳಕ್ಕೆ ಬಂದ ಪರಪ್ಪನ ಅಗ್ರಹಾರ ಸ್ಟೇಷನ್ ಪೋಲಿಸರು ಆಗಿರುವ ಅನ್ಯಾಯದ ವಿರುದ್ಧ ದೂರು ನೀಡುವಂತೆ ಚಾಲಕರಿಗೆ ಹೇಳಿದಾಗ, ಈ ಹಿಂದೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ ಆದರೆ ಪೋಲಿಸರು ಇವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಉಬರ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವಂತೆ ಚಾಲಕರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:05 pm, Mon, 24 November 25

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು