AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದೇ ಕಿತ್ತಾಟ ಇಲ್ಲ’; ‘ಮಾರ್ಟಿನ್’ ಸಿನಿಮಾ ವದಂತಿಗೆ ತೆರೆ ಎಳೆದ ನಿರ್ದೇಶಕ, ನಿರ್ಮಾಪಕ

‘ಯಾವುದೇ ಕಿತ್ತಾಟ ಇಲ್ಲ’; ‘ಮಾರ್ಟಿನ್’ ಸಿನಿಮಾ ವದಂತಿಗೆ ತೆರೆ ಎಳೆದ ನಿರ್ದೇಶಕ, ನಿರ್ಮಾಪಕ

ರಾಜೇಶ್ ದುಗ್ಗುಮನೆ
|

Updated on: Apr 19, 2024 | 7:20 AM

Share

‘ಮಾರ್ಟಿನ್’ ಸಿನಿಮಾ ಸೆಟ್ಟೇರಿ ಸಾಕಷ್ಟು ಸಮಯ ಕಳೆದಿದೆ. ಸದ್ಯ ಚಿತ್ರದ ಕೆಲಸಗಳು ನಡೆಯುತ್ತಿವೆ. ಈ ಮಧ್ಯೆ ತಂಡ ಫಿಲ್ಮ್​ ಚೇಂಬರ್​ಗೆ ದೂರು ನೀಡಿತ್ತು. ಈ ವಿಚಾರದಲ್ಲಿ ಸ್ಪಷ್ಟನೆ ನೀಡೋ ಕೆಲಸವನ್ನು ತಂಡ ಮಾಡಿದೆ. ಆ ರೀತಿ ಯಾವುದೇ ಸಮಸ್ಯೆ ಇಲ್ಲ ಎಂದು ತಂಡ ಸ್ಪಷ್ಟನೆ ನೀಡಿದೆ.

‘ಮಾರ್ಟಿನ್’ ಸಿನಿಮಾ (Martin Movie) ಸೆಟ್ಟೇರಿ ಸಾಕಷ್ಟು ಸಮಯ ಕಳೆದಿದೆ. ಸದ್ಯ ಚಿತ್ರದ ಕೆಲಸಗಳು ನಡೆಯುತ್ತಿವೆ. ಈ ಮಧ್ಯೆ ತಂಡ ಫಿಲ್ಮ್​ ಚೇಂಬರ್​ಗೆ ದೂರು ನೀಡಿತ್ತು. ಈ ವಿಚಾರದಲ್ಲಿ ಸ್ಪಷ್ಟನೆ ನೀಡೋ ಕೆಲಸವನ್ನು ತಂಡ ಮಾಡಿದೆ. ನಿರ್ದೇಶಕ ಎಪಿ ಅರ್ಜುನ್ ಹಾಗೂ ನಿರ್ಮಾಪಕ ಉದಯ್ ಮೆಹ್ತಾ ಒಟ್ಟಿಗೆ ಬಂದು ವಿಡಿಯೋ ಮಾಡಿದ್ದಾರೆ. ‘ನಮ್ಮ ಮಧ್ಯೆ ಯಾವುದೇ ಕಿತ್ತಾಟ ಇಲ್ಲ. ಇದು ವದಂತಿ ಅಷ್ಟೇ’ ಎಂದಿದ್ದಾರೆ ಎಪಿ ಅರ್ಜುನ್. ಉದಯ್ ಮೆಹ್ತಾ ಮಾತನಾಡಿ, ‘ತಪ್ಪು ಮಾಹಿತಿ ಸ್ಪ್ರೆಡ್ ಮಾಡಬೇಡಿ. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದೇವೆ. ಡಬ್ಬಿಂಗ್ ಮುಗಿದಿದೆ’ ಎಂದು ಹೇಳಿಕೆ ನೀಡಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅರ್ಜುನ್, ‘ಸಿಜಿ ಕೆಲಸದ ವಿಚಾರಕ್ಕೆ ಸಂಬಂಧಿಸಿ ನಾವು ಫಿಲ್ಮ್​ ಚೇಂಬರ್​ಗೆ ದೂರು ನೀಡಿದ್ದೆವು ಅಷ್ಟೇ. ಅಲ್ಲಿ ಸಮಸ್ಯೆ ಆಗಿದ್ದರಿಂದ ನಾವು ದೂರು ಕೊಡಬೇಕಾಯಿತು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More