ಮತ್ತೆ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೋಡುತ್ತಿದ್ದಾಗಲೇ ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ವಿವಾದಾತ್ಮಕವಾದ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. ಈ ಹೇಳಿಕೆ ಭಾರೀ ವಿವಾದವನ್ನು ಸೃಷ್ಟಿಸಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ 'ಸನಾತನ ಧರ್ಮದ ನಿರ್ಮೂಲನೆ'ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ ಮೌನವಾಗಿದ್ದರು.
ಚೆನ್ನೈ, ಮೇ 12: ತಮಿಳುನಾಡಿನಲ್ಲಿ ಮತ್ತೊಮ್ಮೆ ಸನಾತನ ಧರ್ಮದ ಸುತ್ತಲಿನ ವಿವಾದ ಸೃಷ್ಟಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ ‘ಸನಾತನ ಧರ್ಮದ ನಿರ್ಮೂಲನೆ’ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಮೌನವಾಗಿದ್ದರು.
“ಜನರನ್ನು ಬೇರ್ಪಡಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಸ್ಟಾಲಿನ್ ತಮಿಳುನಾಡು ಚುನಾವಣೆಯ ನಂತರ ವಿಧಾನಸಭಾ ಅಧಿವೇಶನದ ಮೊದಲ ದಿನದಂದು ಹೇಳಿದ್ದಾರೆ. ಅವರ ಈ ಹೇಳಿಕೆಗಳು ಸನಾತನ ಧರ್ಮದ ಬಗ್ಗೆ ಅವರ ಹಿಂದಿನ ಹೇಳಿಕೆಗಳನ್ನು ಪ್ರತಿಬಿಂಬಿಸುತ್ತವೆ. ಅದರಲ್ಲಿ ಅವರು ಪ್ರಾಚೀನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳ ಜೊತೆ ಹೋಲಿಸಿದ್ದರು. ಅಂತಹ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಜನರನ್ನು ಒತ್ತಾಯಿಸಿದ್ದರು. ಈ ಹೇಳಿಕೆಗಳ ಬಳಿಕ ಸ್ಟಾಲಿನ್ಗೆ ದೊಡ್ಡ ಕಾನೂನು ತೊಂದರೆ ಎದುರಾಗಿತ್ತು. ಅವರ ವಿರುದ್ಧ ಹಲವಾರು ನ್ಯಾಯಾಲಯ ಪ್ರಕರಣಗಳು ದಾಖಲಾಗಿದ್ದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ