ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

Edited By:

Updated on: Jun 14, 2026 | 9:54 PM

ಅನಂತ್ ಅಂಬಾನಿ ಅವರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉದ್ಯಮಿ ಮುಕೇಶ್ ಅಂಬಾನಿಯವರ ಪುತ್ರ ಅನಂತ್, ತಮ್ಮ ಕುಟುಂಬದ ಗುರೂಜಿಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ದೇಗುಲದ ವತಿಯಿಂದ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಭಕ್ತಿಯಿಂದ ಗಣಪತಿ ಪ್ರಾರ್ಥನೆಯೊಂದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಇತ್ತೀಚೆಗೆ ಕೇರಳದ ಪ್ರಮುಖ ದೇವಾಲಯಗಳು ಸೇರಿದಂತೆ ದೇಶದ ಹಲವೆಡೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇದೀಗ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ. ಇನ್ನು ಇತ್ತೀಚೆಗೆ ತಮಿಳುನಾಡು ಸಿಎಂ ವಿಜಯ್ ಕೂಡ  ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us