ಶಿರೂರು ಗುಡ್ಡ ಕುಸಿತ: ಟ್ರಕ್​ ನದಿಯ 24 ಅಡಿ ಆಳದಲ್ಲಿದೆ, ಅದರಲ್ಲೊಂದು ದೇಹವಿದೆ: ಸ್ವಾಮೀಜಿ ಸ್ಫೋಟಕ ಭವಿಷ್ಯ

Edited By:

Updated on: Jul 29, 2024 | 8:05 PM

ಶಿರೂರು ಗುಡ್ಡ ದುರಂತ ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಭೇಟಿ ನೀಡಿದ್ದು, ಈ ವೇಳೆ ಪೆಂಡೋಲಮ್, ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಪರೀಕ್ಷಿಸಿದ್ದಾರೆ. ಬಳಿಕ ಲಾರಿ ಎಲ್ಲಿದೆ? ಎಷ್ಟು ಆಳದಲ್ಲಿ ಎನ್ನುವ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕಾರವಾರ, (ಜುಲೈ 29): ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈಗಾಗಲೇ 8 ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಮೂವರ ಪತ್ತೆಗಾಗಿ ಕಳೆದ 15ದಿನಗಳಿಂದ ಹುಟುಕಾಟ ನಡೆಸಿದ್ದಾರೆ. ಇನ್ನು ದುರಂತ ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಭೇಟಿ ನೀಡಿ, 17 ಮೃತದೇಹ ಇವೆ. ಸದ್ಯ 8 ಮೃತದೇಹಗಳು ಪತ್ತೆ, ಇನ್ನೂ 9 ಶವಗಳು ಪತ್ತೆ ಆಗಬೇಕಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಲಾರಿ ಎಲ್ಲಿದೆ ಎಂದು ಎಲೆಕ್ಟ್ರಾನಿಕ್ ಸ್ಕ್ಯಾನರ್ ಮೂಲಕ ನೋಡಿದ ಸ್ವಾಮೀಜಿ, ಗಂಗಾವಳಿ ನದಿಯಲ್ಲಿ 24 ಅಡಿ ಆಳದಲ್ಲಿ ಲಾರಿ ಇದೆ. ಟ್ರಕ್ ಇರುವ ಜಾಗದ ಬಳಿ ಒಂದು ಮೃತದೇಹ ಇದೆ. ಇನ್ನುಳಿದವರ ಮೃತದೇಹ ನದಿಯಲ್ಲಿ ಕೊಚ್ಚಿಹೋಗಿವೆ ಎಂದು ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More